ಧಾರವಾಡ | 10,780 ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಿದ ಕಾರ್ಮಿಕ ಇಲಾಖೆ

Date:

Advertisements

ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಲ್ಲದೇ ಇದ್ದರೂ ನೋಂದಣಿ ಮಾಡಿಕೊಂಡ 10,780 ಮಂದಿಯನ್ನು ಕಾರ್ಮಿಕ ಇಲಾಖೆ ಪತ್ತೆ ಮಾಡಿ, ಅವರು ಹೊಂದಿದ್ದ ಕಾರ್ಮಿಕ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್ ಮಾಹಿತಿ ನೀಡಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟಡ ಕಾರ್ಮಿಕರಿಗಾಗಿ ಇಲಾಖೆಯಿಂದ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇವು ಅರ್ಹರಿಗೆ ಸಿಗಬೇಕೆಂದು ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಆದರೂ, ಕೆಲವರು ಸುಳ್ಳು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರೆಂದು ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳ ಪರಿಶೀಲನೆ, ದೂರವಾಣಿ ಮೂಲಕ ನಡೆಸಿದ ವಿಚಾರಣೆ ವೇಳೆ ಇವರು ಕಾರ್ಮಿಕರಲ್ಲವೆಂದು ತಿಳಿದುಬಂದಿದೆ. ಒಂದು ವೇಳೆ, ಇವರು ಸರ್ಕಾರದಿಂದ ಅನುಕೂಲ ಪಡೆದ ಫಲಾನುಭವಿಗಳಾಗಿದ್ದರೆ, ಎಫ್ಐಆರ್ ದಾಖಲಿಸಲಾಗುತ್ತಿತ್ತು ಎಂದು ವಿವರಿಸಿದರು.

Advertisements

ಕಟ್ಟಡ ಕಾರ್ಮಿಕರು ಈ ಹಿಂದೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗಾಗಿ ಅರ್ಜಿ ಸಲ್ಲಿಸಬೇಕಿತ್ತು. ಈಗ ಕಾರ್ಮಿಕ ಇಲಾಖೆಗಾಗಿಯೇ ಹೊಸ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದು, ಮೂರು ತಿಂಗಳಿಂದ ಇದು ಕಾರ್ಯನಿರ್ವಹಿಸುತ್ತಿದೆ. ಇನ್ಮುಂದೆ ಯಾರಾದರೂ ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದರೆ, ಅವರ ಆಧಾರ್ ಕಾರ್ಡ್ ಮಾಹಿತಿ ದಾಖಲಿಸಿ, ಮತ್ತೊಮ್ಮೆ ಅರ್ಜಿ ಸಲ್ಲಿಸದಂತೆ ತಡೆಹಿಡಿಯಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X