ಧಾರವಾಡ | 33 ಸದಸ್ಯ ಬಲ‌ ಖ್ಯಾತಿಯ ಸಂಶಿ ಗ್ರಾಪಂ ಚುನಾವಣೆ; ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಆಯ್ಕೆ

Date:

Advertisements

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅತಿದೊಡ್ಡ ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಇದೀಗ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಗಿರೀಶಗೌಡ ಪಾಟೀಲ್, ಉಪಾಧ್ಯಕ್ಷೆಯಾಗಿ ಲೀಲಾವತಿ ಪ. ಸೂಲದ ಆಯ್ಕೆಯಾಗಿದ್ದಾರೆ.

33 ಸದಸ್ಯ ಬಲ ಖ್ಯಾತಿಗೆ ಪಾತ್ರವಾದ ಸಂಶಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಗಿರೀಶಗೌಡ ಪಾಟೀಲ ಹಾಗೂ ಮಲ್ಲೇಶಪ್ಪ ಬೆಳವಡಿ ನಾಮಪತ್ರ ಸಲ್ಲಿಸಿದ್ದರು. ಮಲ್ಲೇಶಪ್ಪ 16 ಮತ ಪಡೆದರೆ; ಗಿರೀಶಗೌಡ ಪಾಟೀಲ 17 ಮತ ಪಡೆದು 1 ಮತದ ಅಂತರದಿಂದ ಜಯಗಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಲೀಲಾವತಿ ಪ. ಸೂಲದ ಹಾಗೂ ನಿಂಗವ್ವ ಕುಮ್ಮಣ್ಣವರ ಉಮೇದುವಾರಿಕೆ ಸಲ್ಲಿಸಿದ್ದರು. ನಿಂಗವ್ವ 14 ಮತಗಳಿಂದ ಸೋಲುಂಡರೆ; ಲೀಲಾವತಿ 19 ಮತ ಪಡೆದು ಜಯಭೇರಿ ಆಗಿದ್ದಾರೆ ಎಂದು ಹೇಳಲಾಗಿದೆ.

ಈ ವೇಳೆ ನೂತನ ಅಧ್ಯಕ್ಷ ಗಿರೀಶಗೌಡ ಪಾಟೀಲ ಹಾಗೂ ಉಪಾಧ್ಯಕ್ಷೆ ಲೀಲಾವತಿ ಸೂಲದ ಮಾತನಾಡಿ, ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಶಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಇದಕ್ಕೆ ಗ್ರಾಮದ ಗುರು-ಹಿರಿಯರು ಸಹಕಾರ ನೀಡಬೇಕು. ಗ್ರಾಮದಲ್ಲಿ ಮೂಲ ಸೌಲಭ್ಯಗಳನ್ನು ಒಳಗೊಂಡಂತೆ ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸುತ್ತೇವೆ ಎಂದರು.

Advertisements

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸರ್.ಸಿದ್ದಪ್ಪ ಕಂಬಳಿ, ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸಲು ಹೋರಾಡಿದವರು: ರಾಮಪ್ಪ ಬಡಿಗೇರ

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಜು ಪುಟ್ಟಣ್ಣವರ, ಗೌರವ್ವ ಹರಕುಣಿ, ಸರ್ವ ಸದಸ್ಯರು ಹಾಗೂ ಪಿಡಿಒ ಪಾಂಡುರಂಗ ಹತ್ತಿ, ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮದ ಗುರು-ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X