ಧಾರವಾಡ | ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು: ಪ್ರೊ. ಕವಿತಾ ಚಂದಗುಡಿ

Date:

Advertisements

ಜನಜಾಗೃತಿ ಬೀದಿ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ರಾಷ್ಟ್ರದ ಪ್ರಗತಿಯ ಪ್ರಥಮ ಹೆಜ್ಜೆ ಕುಟುಂಬ, ಈ ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು ಎಂದು ಕಿಟಲ್ ಮಹಾವಿದ್ಯಾಲಯದ ಹಿಂದಿ ವಿಭಾಗದ ಪ್ರೊ. ಕವಿತಾ ಚಂದಗುಡಿ ಹೇಳಿದರು.

ಧಾರವಾಡದ ಅಂಜುಮನ್ ಅಧ್ಯಯನ ಕೇಂದ್ರದ ಹಿಂದಿ ವಿಭಾಗದ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿದರು. ಹಿಂದಿ ರಾಷ್ಟ್ರಭಾಷೆ ಆಗುವತ್ತ ಸಾಗುತ್ತಿದೆ. ಹಿಂದಿ ಭಾಷೆಯ ಅಧ್ಯಯನದಿಂದ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಗಳಿಸಬಹುದೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇಂಗಿಷ್ ವಿಭಾಗದ ಮುಖ್ಯಸ್ಥೆ ಡಾ. ಅಸ್ಮಾನಾಜ್ ಬಳ್ಳಾರಿ, ಪ್ರತಿಭೆ ಬೆಳೆಸಲು ಇದು ಉತ್ತಮ ಅವಕಾಶ. ಎಲ್ಲ ವಿದ್ಯಾರ್ಥಿಗಳು ಆಸಕ್ತಿಯಿಂದ ಇಂಥ ಕಾರ್ಯಕ್ರಮದಲ್ಲಿ ಇನ್ನು ಹೆಚ್ಚು ಹೆಚ್ಚಾಗಿ ಪಾಲಗೊಳ್ಳ ಬೇಕೆಂದು ಪ್ರೇರೇಪಿಸಿದರು. ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಇದು ಉತ್ತಮ ಮಾರ್ಗ ಎಂದರು.

Advertisements

ಐಕ್ಯೂಏಸಿ ಸಂಯೋಜಕರಾ ಡಾ. ಎನ್.ಬಿ. ನಲವತವಾಡ ʼಜೀವಜಲ ಉಳಿಸಿ ಮಿತವಾಗಿ ಬಳಸಿʼ ಎಂಬ ಸಂದೇಶವನ್ನು ಸಾರಿದರು.. ಮುಕಾಭಿನಯವನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರೊ. ಹಿನಾ ಕೌಸರ್ ವಂದನಾರ್ಪಣೆ ಕಾರ್ಯಕ್ರಮ ನೆರವೇರಿಸಿದರು. ಪ್ರೊ. ಶಮೀಮ ಕಲ್ಬುರ್ಗಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಫೈರೋಜಾ ಮೇಸ್ತ್ರಿ ಸ್ವಾಗತಿಸಿದರು. ಕು. ಸ್ಮಾಲೇಹಾ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X