ಧಾರವಾಡ | ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು: ಡಾ. ಕೆ ಆರ್ ದುರ್ಗಾದಾಸ್

Date:

Advertisements

ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಡಾ. ಕೆ ಆರ್ ದುರ್ಗಾದಾಸ್ ತಿಳಿಸಿದರು.

ಧಾರವಾಡ ನಗರದ ರಂಗಾಯಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ವತಿಯಿಂದ ಆಯೋಜಿಸಿದ್ದ ‘ಪ್ರವಾದಿ ಮುಹಮ್ಮದ್ ಲೇಖನ ಸಂಕಲನ’ ಬಿಡುಗಡೆ ಕಾರ್ಯಕ್ರಮ‌ದಲ್ಲಿ ಅವರು ಮಾತನಾಡಿದರು.

“ನಮ್ಮ ದೇಶದಲ್ಲಿ ದೇವರ ಹೆಸರಿನಲ್ಲಿ ನಡೆಯುವ ಶೋಷಣೆಯನ್ನು ನಿಲ್ಲಿಸಬೇಕು. ಜಾತಿ, ಮತ, ಧರ್ಮದ ಹೆಸರಿನಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಗಳು ದಿನಂಪ್ರತಿ ನಡೆಯುತ್ತಿವೆ. ಅಲ್ಲದೆ ಪೂರ್ವಾಗ್ರಹ ಪೀಡಿತರು ಮುಸಲ್ಮಾನ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಮತ್ತೊಂದು ಸಮುದಾಯವನ್ನು ಎತ್ತಿಕಟ್ಟಿ ಜನರಲ್ಲಿ ದ್ವೇಷ ಬಿತ್ತುವುದು ಮತ್ತು ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು. ಸಂವಿಧಾನದ ದೃಷ್ಟಿಯಲ್ಲಿ ಸರ್ವರೂ ಸಮಾನರಾಗಲದ ಕಾರಣ ಸರ್ಕಾರಗಳು ಎಲ್ಲರನ್ನೂ ಸಮಾನವಾಗಿ ಕಾಣಬೇಕು” ಎಂದು ಹೇಳಿದರು.

Advertisements

ಈ ಸಂದರ್ಭದಲ್ಲಿ ಅಂಜುಮನ ಸಂಸ್ಥೆ ಉಪಾಧ್ಯಕ್ಷ ಬಸೀರ ಅಹ್ಮದ್ ಜಾಗೀರದಾರ, ಲಜನತ್ ಉಲ್ ಉಮೇಲಾ ಅಧ್ಯಕ್ಷ ಮುಫ್ತಿ ಮೊಹಮ್ಮದ್ ಯೂಸುಫ್, ಮುಸ್ತಾಕ್ ಅಹ್ಮದ್ ಹಾವೇರಿ ಪೇಟ, ಎಸ್,ವಾಯ್, ಶೇಖ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ದಾವಣಗೆರೆ | ವಿಶೇಷ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಬಾಗಿಲು ತೆರೆದಿಟ್ಟ ‘ಮಸೀದಿ’

ಕಾರ್ಯಕ್ರಮದ ಮೊದಲು ಮೊಹಮ್ಮದ್ ಇಸ್ಮಾಯಿಲ್ ಬೀಡಿವಾಲೆ ಕುರಾನ್ ಪಠಣ ಮಾಡಿದರು,
ಜಾವೀದ್ ಗೋಲಂದಾಜ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X