ಧಾರವಾಡ | ಸಂತೋಷ ಲಾಡ್‌ಗೆ ಅವಮಾನ; ವಿಜಯೇಂದ್ರ ಕ್ಷಮೆ ಕೇಳಬೇಕು: ಅರವಿಂದ ಏಗನಗೌಡರ ಆಗ್ರಹ

Date:

Advertisements

ಕೀಳು ಮಟ್ಟದ ಪದ ಬಳಸಿ ಸಚಿವರಾದ ಸಂತೋಷ ಲಾಡವರಿಗೆ ಅವಮಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷಮೆ ಕೇಳಬೇಕೆಂದು ಧಾರವಾಡ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯೆಂದ್ರ ಅವರೇ ನಿಮ್ಮ ತಂದೆಯ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿರುವ ನೀವು, ನಿಮ್ಮ ಹೆಸರಿನ ಮುಂದಿರುವ ಯಡಿಯೂರಪ್ಪ ಎಂಬ ಹೆಸರು ತೆಗೆದುಬಿಟ್ಟರೇ ಈ  ರಾಜಕಾರಣದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಹೇಳಿದರು.

ಯಾವುದೇ ಗಾಡ್ ಫಾದರ್‌ಗಳಿಲ್ಲದೇ ತಳಮಟ್ಟದಿಂದ ಹಂತಹಂತವಾಗಿ ಬೆಳೆದ ಸಂತೋಷ್ ಲಾಡ್ ಅವರ ಬಗ್ಗೆ ಮಾತಾಡೋಕೆ ನಿಮಗೆ ಅರ್ಹತೆ ಹಾಗೂ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

Advertisements

ಒಂದು ಸಾಮಾನ್ಯ ಕಾರ್ಪೊರೇಟರ್‌ ಗಿರಿಯಿಂದ ಹಿಡಿದು ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಚಿವಗಿರಿಯವರೆಗೆ ಸ್ವಂತ ಬಲದ ಮೇಲೆ ಬೆಳೆದ ನಾಯಕರಾದ ಸಂತೋಷ್ ಲಾಡ ಎಂಬುದು ಮರೆಯಬೇಡಿ ಎಂದರು.

ಲಾಡ್ ಸ್ವಂತ ಹಣದಲ್ಲಿ ಸಾವಿರಾರು ಬಡಜನರ, ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ತಮ್ಮ ಹಾಗೆ ಕೋವಿಡ್ ಸಮಯದಲ್ಲಿ ಮಾಸ್ಕ್-ಸ್ಯಾನಿಟೈಸರ್ ಹಗರಣ ಮಾಡಿ ಸಾವಿರಾರು ಕೋಟಿ ಲೂಟಿ ಹೊಡೆದು, ಜನರ ಹೆಣದ ಮೇಲೆ ರಾಜಕಾರಣ ಮಾಡಿದವರಲ್ಲ ಎಂಬುದು ರಾಜ್ಯಕ್ಕೇ ತಿಳಿದ ಸಂಗತಿ ಎಂದರು.

ಅವರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು‌ ನಿಮ್ಮ ರಾಷ್ಟ್ರ ನಾಯಕರಿಗೆ ಆಗುತ್ತಿಲ್ಲ, ಇದರಿಂದ ಹತಾಶೆಗೊಂಡಿರುವ ನೀವು ಅವರ ದ್ವನಿ ಹತ್ತಿಕ್ಕಲು ಈ ರೀತಿಯ ಕ್ಷುಲ್ಲಕ ಮಾತುಗಳಾನ್ನಾಡುತ್ತಿದ್ದೀರೆಂದು ಜನಸಾಮಾನ್ಯರಿಗೂ ಗೊತ್ತಾಗಿದೆ. ಈ ಕೂಡಲೆ ಬಿಜೆಪಿ ರಾಜ್ಯಾಧ್ಯಕ್ಷ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X