ಧಾರವಾಡ | ‘ವಚನ ದರ್ಶನ’ ಕೃತಿ ಮುಟ್ಟುಗೋಲು ಹಾಕಲು ಬಸವಪರ ಸಂಘಟನೆಗಳ ಆಗ್ರಹ

Date:

Advertisements

ಶರಣ ಸಮಾಜದ ಶಾಂತಿ ಸ್ವಾಸ್ಥ್ಯ ಹಾಳು ಮಾಡಲೆಂದೇ ರಚನೆಯಾದ ‘ವಚನ ದರ್ಶನ’ ಕೃತಿಯು ಕಳಪೆ ಮಟ್ಟದಲ್ಲಿದೆ ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಅಧ್ಯಕ್ಷ ಡಾ ಶಶಿಕಾಂತ ಪಟ್ಟಣ ಹರಿಹಾಯ್ದರು.

ವಿವಿಧ ಬಸವಪರ ಸಂಘಟನೆಗಳು ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಸವ ತತ್ವವು ಜಗತ್ತಿನ ಪ್ರಗತಿಪರ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವದ ಮಾದರಿ ಎನಿಸಿದೆ. ಶರಣರ ಅನುಭವ ಮಂಟಪದ ಪರಿಕಲ್ಪನೆಯನ್ನು ಬುಡಮೇಲು ಮಾಡುವ ರೀತಿಯಲ್ಲಿ ಕೆಲ ಸಂಪ್ರದಾಯವಾದಿಗಳು ವಚನ ದರ್ಶನ ಕೃತಿ ರಚಿಸಿದ್ದಾರೆ. ಈ ಕೂಡಲೇ ಈ ಕೃತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಬಸವಣ್ಣನವರು ವರ್ಗ, ವರ್ಣ, ಲಿಂಗಭೇದ ಮತ್ತು ಆಶ್ರಮ ರಹಿತ ಸಾಂಸ್ಥೀಕರಣವಲ್ಲದ ಬಂಡಾಯ ಧೋರಣೆ ಹೊಂದಿದ ಪುರೋಗಾಮಿ ವಿಚಾರಗಳಿಂದ ವಚನ ಚಳುವಳಿಯನ್ನು ಹುಟ್ಟು ಹಾಕಿದರು. ಎಲ್ಲ ಕಾಯಕದ ವರ್ಗದವರು ಇಂತಹ ಅಪೂರ್ವ ವೈಚಾರಿಕ ಕ್ರಾಂತಿಗೆ ತಮ್ಮನ್ನು ತೊಡಗಿಸಿಕೊಂಡರು. ಕಂಬಾರ, ಕುಂಬಾರ, ಅಗಸ, ಬೆಸ್ತ, ಮಾದಿಗ, ಮೇದಾರ ಹೀಗೆ ಬದುಕಿನಲ್ಲಿ ಅಗತ್ಯವಿರುವ ಶ್ರಮ ಸಂಸ್ಕೃತಿಯ ವಾರಸುದಾರರು ಶರಣರು ಎಂದು ತಿಳಿಸಿದರು.

Advertisements

ಶರಣರು ಹೊರಗಿನ ಭೌತಿಕ ದೇವರಗಳನ್ನು, ಗುಡಿ ಸಂಸ್ಕೃತಿ, ಕಂದಾಚಾರ, ಬಹುದೇವೋಪಾಸನೆ, ಸಾಂಪ್ರದಾಯಿಕ ಅಂಧಶ್ರದ್ಧೆಗಳ ವಿರುದ್ಧ ಬಂಡೆದ್ದಿದ್ದರು. ವಚನ ಚಳುವಳಿಗೆ ತನ್ನದೇ ಆದ ಸ್ವಾನುಭಾವದ ನೆಲೆ ಇದೆ. ಇಂತಹ ವಚನ ಸಾಹಿತ್ಯವು ಹನ್ನೆರಡನೆಯ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಸುಮಾರು 250 ವರ್ಷಗಳ ವರೆಗೆ ಕಾಲಗರ್ಭದಲ್ಲಿ ಹೂತು ಹೋಗಿತ್ತು. ಪ್ರಸ್ತುತ ಅಯೋಧ್ಯಾ ಪ್ರಕಾಶನದವರು ಸದಾಶಿವ ಸ್ವಾಮಿಗಳ ಪ್ರಧಾನ ಸಂಪಾದಕತ್ವದಲ್ಲಿ ಹೊರ ತಂದ ‘ವಚನ ದರ್ಶನ’ ಕೃತಿಯು ಲಿಂಗಾಯತ ಸಮಾಜ ಮತ್ತು ಬಸವ ಭಕ್ತರನ್ನು ದಿಕ್ಕು ತಪ್ಪಿಸುವ ಕೃತಿಯಾಗಿದೆ.

ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರದಿಂದ ಬೇರೆ ಬೇರೆ ನಗರಗಳಲ್ಲಿ ವಚನ ದರ್ಶನ ಬಿಡುಗಡೆ ಮಾಡಿ ಪುಸ್ತಕವನ್ನು ಮಾರಾಟ ಮಾಡುತ್ತಿದ್ದಾರೆ. ಒಂದು ವೇಳೆ ಸರಕಾರವು ಈ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ಎಚ್ಚರಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಬಸವ ಕೇಂದ್ರದ ಅಧ್ಯಕ್ಷ ಸಿದ್ರಾಮಣ್ಣ ನಡಕಟ್ಟಿ, ಜಿ ವಿ ಕೊಂಗವಾಡ, ಶೇಖರ ಕುಂದಗೋಳ, ಉಮೇಶ ಕಟಗಿ. ಎಂ ಎಸ್ ಸಿರಿಯಣ್ಣವರ, ಎಂ ಎಸ್ ಚೌಧರಿ, ಶಿವರುದ್ರಗೌಡ, ಮಲ್ಲಿಕಾರ್ಜುನ ಹಳ್ಳಿಕೇರಿ, ಕುಂದರಗಿ, ಜಯಶ್ರೀ ಪಾಟೀಲ, ಸಿ ಜಿ ಪಾಟೀಲ ಮುಂತಾದವರು ಪಾಲ್ಗೊಂಡಿದ್ದರು.

ಪುಣೆಯ ಬಸವ ತಿಳುವಳಿಕೆ ಸಂಶೋಧನಾ ಕೇಂದ್ರ, ಲಿಂಗಾಯತ ಏಕತಾ ಸಮಿತಿ ಅನುಭವ ಮಂಟಪ ಯಾಲಕ್ಕಿ ಶೆಟ್ಟರ ಕಾಲೋನಿ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್, ಜೆಎಲ್ಎಂ, ರಾಷ್ಟ್ರೀಯ ಬಸವದಳ ಸಂಘಟನೆಗಳು ಭಾಗವಹಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X