ಧಾರವಾಡ | ಪ್ರಜಾಪ್ರಭುತ್ವದ ಪ್ರಥಮ ರೂವಾರಿ ಬಸವಣ್ಣ: ಬಸವರಾಜ ಹೊರಟ್ಟಿ

Date:

Advertisements

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ ಜಾತ್ಯತೀತ, ಸಮಸಮಾಜ, ಶೋಷಣೆ ರಹಿತ ಹಾಗೂ ಕಾಯಕ ದಾಸೋಹದ ಕ್ರಾಂತಿಕಾರಿ ತತ್ವ ಆದರ್ಶವನ್ನು ಸಾರಿದ ಬಸವಣ್ಣನವರು ಭಾರತದ ಪ್ರಥಮ ಸ್ವಾತಂತ್ರ ವಿಚಾರವಾದಿ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಾಂಸ್ಕ್ರತಿಕ ಇಲಾಖೆ ಆಶ್ರಯದಲ್ಲಿ ಶನಿವಾರದಂದು  ಕರ್ನಾಟಕದ ಸಾಂಸ್ಕ್ರತಿಕ ನಾಯಕ ವಿಶ್ವಗುರು ಬಸವಣ್ಣ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

“ಶೋಷಣೆ ರಹಿತ, ಸಮಸಮಾಜ, ಜಾತ್ಯತೀತ ಮಹಿಳಾ ಸ್ವಾತಂತ್ರತೆಯಂಥ ಕ್ರಾಂತಿಕಾರಿ ಬದಲಾವಣೆಯನ್ನು ತಂದು ಇಡೀ ಜಗತ್ತಿಗೆ ಬಸವಣ್ಣ ಮಾದರಿಯಾದರು” ಎಂದು ಹೊರಟ್ಟಿ ಹೇಳಿದರು.

Advertisements

“ಬಸವಣ್ಣರಂತಹ ಮಹಾನ್ ವ್ಯಕ್ತಿ ಕರ್ನಾಟಕದಲ್ಲಿ ಇದ್ದು, ನಮ್ಮ ನಾಡಿಗೆ ದೊಡ್ಡ ಗೌರವ. ಬಸವಣ್ಣರ ಆಚಾರ, ವಿಚಾರ, ತತ್ವ, ಆದರ್ಶಗಳು ದೇಶಕ್ಕೆ ಹಾಗೂ ಜಗತ್ತಿಗೆ ಪ್ರಚಾರವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಘ ಸಂಸ್ಥೆಗಳಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕ್ರತಿಕ ನಾಯಕರೆಂದು ಭಾವಚಿತ್ರ ಹಾಕಿರಿವುದು ಶ್ಲಾಘನೀಯ. ಇದರಿಂದ ಜನಸಾಮಾನ್ಯರಿಗೂ ಬಸವಣ್ಣರ ತತ್ವಗಳು ತಲುಪಲಿವೆ. ಮನೆಯೆ ಮೊದಲ ಪಾಠಶಾಲೆ, ಗೃಹಣಿಯರು ಈ ನಿಟ್ಟಿನಲ್ಲಿ ಬಸವಣ್ಣರ ಅಚಾರ, ವಿಚಾರ, ಸಂಸ್ಕಾರಗಳನ್ನು ಮಕ್ಕಳಿಗೆ ನೀಡಲು ಮುಂದಾಗಬೇಕು” ಎಂದರು.

ಡಾ ಎಂ ಎಂ ಕಲಬುರಗಿ ರಾಷ್ಟ್ರಿಯ ಪ್ರತಿಷ್ಟಾನದ ಅಧ್ಯಕ್ಷ ಡಾ ವೀರಣ್ಣ ರಾಜೂರ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, “ಬಸವಣ್ಣನವರನ್ನು ಈ ಜಗತ್ತು ಕಂಡ ಮೊದಲ ಸ್ವತಂತ್ರ ಧಾರ್ಮಿಕ ಮಹಾ ಮಾನವತಾವಾದಿ. ಅವರ ಕ್ರಾಂತಿ ಆರಂಭಗೊಂಡಿದ್ದು, ಅವರ ಮನೆಯಲ್ಲಿ ಮಹಿಳಾ ಸಮಾನತೆಯ ವೈಚಾರಿಕತೆಯಿಂದ ಆರಂಭಗೊಂಡಿತ್ತು” ಎಂದರು.

“ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‍ಗೆ ಕಾಯಕ ದಾಸೋಹ ಸೂತ್ರದ ಬಜೆಟ್ ಎಂದು ಹೆಸರಿಟ್ಟಿದ್ದು ಅಭಿನಂದನೀಯ. ಗಳಿಕೆ ಹಾಗೂ ಬಳಕೆಯ ಸಮಾನತೆಯನ್ನು ಹೇಗೆ ಸರಿದೂಗಿಸಬೇಕೆಂದು ಬಸವಣ್ಣನ ತತ್ವದ ಮೂಲಕ ಈಗ ತೋರಿಸಿದ್ದಾರೆ” ಎಂದು ಹೇಳಿದರು.

ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಈ ಕಾರ್ಯಕ್ರಮ‌ವನ್ನು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನೈಜ ಹೋರಾಟಗಾರರ ವೇದಿಕೆ ದೂರು; 5 ದಶಕಗಳ ಬಳಿಕ ಗಂಗಸಂದ್ರಕ್ಕೆ ಬಂತು ಕುಡಿಯುವ ನೀರು

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಪ್ರಾಸ್ತಾವಿಕ ನುಡಿಗಳು, “ಉಳ್ಳವರು ಶಿವಾಲಯ ಕಟ್ಟುವರಯ್ಯಾ” ಎಂಬ ಬಸವಣ್ಣನವರ ವಚನ ವಿವರಿಸಿದ್ದು, ಸಭಿಕರಲ್ಲಿ ಚಪ್ಪಾಳೆ ಹಾಗೂ ಸಂತಸ ಮೂಡಿಸಿ ಶ್ಲಾಘನೆ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ, ಬೇಂದ್ರೆ ಪ್ರತಿಷ್ಠಾನದ ಅಧ್ಯಕ್ಷ ಡಿ ಎಂ ಹೀರೆಮಠ, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರ ಹಾಗೂ ಸಮಾಜದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X