ಧಾರವಾಡ | ವೃದ್ಧೆಯ ಕಪಾಳಕ್ಕೆ ಹೊಡೆದ ಬಸ್‌ ನಿರ್ವಾಹಕಿ; ಪ್ರಯಾಣಿಕರ ತೀವ್ರ ಆಕ್ರೋಶ

Date:

Advertisements

ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.

ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ ಜಾವ ಶೆರೆವಾಡ ಗ್ರಾಮದ ಬಳಿ ಇಬ್ಬರ ನಡುವರ ವಾಗ್ವಾದ ಉಂಟಾದ ಕಾರಣ ವೃದ್ಧೆಯ ಕಪಾಳಕ್ಕೆ ಹೊಡೆದು ಸುಮ್ಮನೆ ಕುಳಿತುಕೊಳ್ಳುವಂತೆ ಹೇಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ವೃದ್ಧೆ ಆಕ್ಷೇಪ ವ್ಯಕ್ತಪಡಿಸಿ ಕಂಡಕ್ಟರ್ ನಡೆಗೆ ತೀವ್ರವಾಗಿ ಖಂಡಿಸಿದ್ದಾರೆ. ಪ್ರಯಾಣಿಕರೆಲ್ಲ ಅಜ್ಜಿಗೆ ಬೆಂಬಲವಾಗಿ ನಿಂತು ನಿರ್ವಾಹಕಿ ವಿರುದ್ಧ ಧ್ವನಿ ಎತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಚ್ಚೆತ್ತುಕೊಳ್ಳದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಈಶ್ವರ ಖಂಡ್ರೆ

ಅಜ್ಜಿಯ ವಯಸ್ಸಿಗಾದರೂ ಗೌರವ ನೀಡದ ನಿರ್ವಾಹಕಿಯ ವರ್ತನೆಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ಸಿನಲ್ಲೇ ನಿರ್ವಾಹಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಿರಿಯ ಸಾರಿಗೆ ಅಧಿಕಾರಿಗಳು ಈ ಕುರಿತು ಏನು ಕ್ರಮ ಕೈಗೊಳ್ಳುವರೆಂದು ಕಾದುನೋಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X