ಧಾರವಾಡ | ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಲು ಸಿಇಒ ಸೂಚನೆ

Date:

Advertisements

ಗ್ರಾಮೀಣ ಪ್ರದೇಶದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಉತ್ತಮ ಭವಿಷ್ಯ ರೂಪಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಖಚಿತಪಡಿಸುವುದಕ್ಕಾಗಿ, ಹಲವು ಅಂಶಗಳ ವಿಶೇಷ ಕಾರ್ಯ ಯೋಜನೆಯೊಂದನ್ನು ಹಮ್ಮಿಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪಾಟೀಲ್ ಸೂಚಿಸಿದರು.

ಜಿಲ್ಲೆಯ ಶಾಲಾ ಶಿಕ್ಷಣ ಘಟಕಾಂಶ ಸುಧಾರಣೆಯ ಜಿಲ್ಲಾ ಸಮಿತಿ, ಮತ್ತು ಶಾಲಾ ಕಟ್ಟಡ ಸಿವಿಲ್ ಕಾಮಗಾರಿಗಳ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, “ನಾಗಾಲೋಟದಲ್ಲಿ ಅಭಿವೃದ್ದಿ ಹೊಂದುತ್ತಿರುವ ತಂತ್ರಜ್ಞಾನದ ಯುಗದಲ್ಲಿ ಕಂಪ್ಯೂಟರ್, ಇಂಟರ್‌ನೆಟ್‌, ಆರ್ಟಿಫಿಷಿಯಲ್ ಇಂಟೆಲಿಜನ್ಸ್‌ ಮುಂತಾದ ವಿಷಯಗಳಲ್ಲಿ ಅಗತ್ಯ ಕೌಶಲಗಳನ್ನು ಗಳಿಸಿಕೊಳ್ಳದಿದ್ದರೆ ಭವಿಷ್ಯದ ದಿನಗಳಲ್ಲಿ ಯುವ ಸಮೂಹ ಉದ್ಯೋಗ ವಂಚಿತವಾಗುವ ಅಪಾಯವಿದೆ. ಸಾಂಘಿಕ ಪ್ರಯತ್ನದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿ ಸಾಧ್ಯ. ಹೀಗಾಗಿ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ನಡೆಸಿ, ಇದಕ್ಕಾಗಿ ವಿಶೇಷವಾಗಿ ವಿನ್ಯಾಸಗೂಳಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳೂ ತಪ್ಪದೇ ಜಿಲ್ಲಾ ಪಂಚಾಯತಿಗೆ ಮಾಹಿತಿ ಸಲ್ಲಿಸಬೇಕು” ಎಂದರು.

“ಶಾಲಾ ಶಿಕ್ಷಣ ಸಂಸ್ಥೆಗೆ ಸಿವಿಲ್ ಕಾಮಗಾರಿಗಳ ಕಟ್ಟಡದ ಅನೇಕ ಪ್ರಗತಿ ಹಂತದಲ್ಲಿ ಪಿಡಬ್ಲೂಡಿ ಅಧಿಕಾರಿಗಳು ಕಟ್ಟಡದ ಗುಣಮಟ್ಟ ಹಾಗೂ ವಿಶಾಲ ಕೊಠಡಿ ನಿರ್ಮಾಣಕ್ಕೆ ಗಮನಹರಿಸಬೇಕು. ಶಾಲಾ ಕಟ್ಟಡ ಇಲ್ಲದೇ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪಿ ಆರ್ ಇ ಡಿ ಅಧಿಕಾರಿಗಳ ಜೊತೆಗೆ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯ ನೀಡಲು ಅಗತ್ಯ ಕ್ರಮ ವಹಿಸಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಶಾಲೆಗಳಲ್ಲಿ ಲಭ್ಯವಿರುವ ಭೌತಿಕ ಸಂಪನ್ಮೂಲ ಹಾಗೂ ಮಾನವ ಸಂಪನ್ಮೂಲವನ್ನು ಅಗತ್ಯತಾನುಸಾರ ಲೆಕ್ಕಿಸಿ ಮರುಹೊಂದಾಣಿಕೆ ಮಾಡುವ ಮೂಲಕ ಮಕ್ಕಳ ಕಲಿಕಾ ಹಕ್ಕುಗಳನ್ನು ಪೋಷಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

Advertisements

ಇದನ್ನೂ ಓದಿ: ಧಾರವಾಡ | ಬುದ್ಧನ ಅಷ್ಟಾಂಗ ಮಾರ್ಗದಿಂದ ಪರಿವರ್ತನೆ ಸಾಧ್ಯ: ಡಾ. ಸಂಜೀವ ಕುಲಕರ್ಣಿ

ಸಭೆಯಲ್ಲಿ ಉಪಕಾರ್ಯದರ್ಶಿ ಬಿ ಎಸ್ ಮೂಗನೂರ್‌ಮಠ, ಮುಖ್ಯ ಯೋಜನಾ ಅಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ‌ಸಿಬ್ಬಂದಿಗಳು‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X