ಧಾರವಾಡ | ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು: ಸಂಗಮೇಶ್ ಬಬಲೇಶ್ವರ

Date:

Advertisements

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ತಿಳಿಸಿದರು.

ಧಾರವಾಡ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳಲ್ಲಿ ಮೇಜರ್ ಧ್ಯಾನ್‍ ಚಂದ್ ಅವರು ಹುಟ್ಟಿ ಬರಲಿ ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ. ಮಕ್ಕಳಲ್ಲಿರುವ ಕ್ರೀಡಾಸಕ್ತಿ ಗುರುತಿಸಿ ನೀರೆರೆದು ಬೆಳೆಸಿದರೆ ಕ್ರೀಡಾ ಜಗತ್ತಿನಲ್ಲಿ ಅದ್ಭುತ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

Advertisements

ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, “ಕ್ರೀಡೆಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕ್ರೀಡಾ ಚಟುವಟಿಕೆಗಳಿಗೆ ಬೇಕಾದ ನಿವೇಶನವನ್ನು ಒದಗಿಸಲು, ಕ್ರೀಡಾಪಟುಗಳಿಗೆ ಅಗತ್ಯ ನೆರವು ಕಲ್ಪಿಸುವ ಎಲ್ಲ ಪ್ರಯತ್ನಗಳನ್ನು ಮಾಡೋಣ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಕೋಟೆ ಮೇಲೆ ಲೋಹದ ಹಕ್ಕಿಗಳ ಚಿತ್ತಾರ; ಕಣ್ತುಂಬಿಕೊಂಡ ಜನ

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ ಟಿ ನಾಥ ಸ್ವಾಮಿ, ಬಾವಿಕಟ್ಟಿ, ಕ್ರೀಡಾ ಇಲಾಖೆ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X