ಧಾರವಾಡ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

Advertisements

ರಾಜ್ಯಪಾಲರ ನಡೆ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, 2020ರಲ್ಲಿ ಬಿಜೆಪಿಯವರು ಮುಡಾ ಹಗರಣ ಮಾಡಿದ್ದಾರೆ.‌ ಸಿದ್ಧರಾಮಯ್ಯನವರು ಬಡವರ ಪರವಾಗಿ ಯೋಜನೆಗಳ ತಂದ ಕಾರಣ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಹೂಡಿರುವ ಬಿಜೆಪಿಗೆ ಸಿಎಂ ಪರ ಇಡೀ ರಾಜ್ಯವೆ ಇದೆ ಎಂಬುದನ್ನು ಅರ್ಥವಾಗಿಸಲು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.

“ಯಾವುದೇ ಕಾರಣಕ್ಕೂ ಸಿದ್ಧರಾಮಯ್ಯನವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮುಖ್ಯಮಂತ್ರಿಗಳ ಬಗ್ಗೆ ಮಾತನಾಡಿರುವುದು ಖಂಡನೀಯ ಹಾಗೂ ಅವರ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಕೆಂಡಕಾರಿದರು.

Advertisements

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಳೆದ ವರ್ಷದ ಬರಗಾಲದಲ್ಲಿ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಸಹಿತ ಪರಿಹಾರ ಸಿಗದ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಮೂಲಕ ಜನರಿಗೆ ಬರಗಾಲ ಪಿಹಾರ ಸಿಕ್ಕ ಪರಿಣಾಮ‌ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟಾಯಿತು. ಹೀಗಾಗಿ ಸಿದ್ಧರಾಮಯ್ಯನವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಮತ್ತು ಇವತ್ತಿನವರಗೂ ಬಿಜೆಪಿಯವರು ಮುಡಾ ಹಗರಣದ ಬಗ್ಗೆ ಒಂದೇ ಒಂದು ದಾಖಲೆಯನ್ನೂ ಹೊರತಂದಿಲ್ಲ. ಸಿಎಂ ಪರವಾಗಿ ರಾಜ್ಯದ ಇಡೀ ಶೋಷಿತ ಮತ್ತು ಅಹಿಂದ ವರ್ಗ ಬೆನ್ನೆಲುಬಾಗಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಹೂಡಿದರೂ ನಾವೆಲ್ಲ ಸಿದ್ಧರಾಮಯ್ಯನವರ ಪರ ಎದ್ದು ನಿಲ್ಲುತ್ತೇವೆ” ಎಂದು ಗುಡುಗಿದರು.

ಇದನ್ನು ಓದಿದ್ದೀರಾ? ಉಡುಪಿ | ನಾರಾಯಣ ಗುರುಗಳ ಸಂದೇಶ ಮಾನವ ಕುಲಕ್ಕೆ ಬಹುದೊಡ್ಡ ಕೊಡುಗೆ: ಚಂದ್ರಹಾಸ ಕಾಪು

ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮುಖಂಡರು, ವಕ್ತಾರರು, ಕಾರ್ಯಕರ್ತರು, ಸಿದ್ಧರಾಮಯ್ಯ ಅಭಿಮಾನಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X