ಧಾರವಾಡ | ಡಿ. 17ರಂದು ಒಳಮೀಸಲಾತಿ ವಿಂಗಡಣೆ ವಿರೋಧಿಸಿ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ

Date:

Advertisements

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಡಿಸೆಂಬರ್ 17 ರಂದು ಭೋವಿ ವಡ್ಡರ, ಬಂಜಾರ, ಲಮಾಣಿ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟ ವತಿಯಿಂದ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕುವುದಾಗಿ ಧಾರವಾಡದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ವೇದಿಕೆಯ ರಾಜ್ಯಾಧ್ಯಕ್ಷ ವೈ. ಕೋಟ್ರೇಶ್‌ ಹೇಳಿದರು.

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕಣ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನೇ ನೆಪವಾಗಿರಿಸಿಕೊಂಡು ರಾಜ್ಯ ಸರ್ಕಾರ ವಿಂಗಡಿಸಲು ಮುಂದಾಗಿರುವುದು ಅವೈಜ್ಞಾನಿಕ ಮತ್ತು ಕಾನೂನು ಬಾಹಿರವಾಗಿದೆ. ರಾಜ್ಯದಲ್ಲಿ ಭೋವಿ ಸಮುದಾಯ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಕೊರಮ-ಕೊರಚ ಸಮುದಾಯಗಳು ದಾರಿದ್ರ್ಯದಲ್ಲೇ ಬದುಕುತ್ತಿವೆ. ಬಂಜಾರ-ಲಂಬಾಣಿ ಸಮುದಾಯಗಳು ಈಗಲೂ ಅಲೆಮಾರಿಗಳಂತೆ ಬದುಕು ನಡೆಸುತ್ತಿದ್ದಾರೆ.

ನ್ಯಾ. ಎ.ಜೆ.ಸದಾಶಿವ ನೀಡಿರುವ ಆಯೋಗದ ವರದಿಯ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು, ಮೀಸಲಾತಿ ವರ್ಗೀಕರಣಕ್ಕೆ ಮುಂದಾಗುವ ಸಂಶಯ ದಟ್ಟವಾಗಿದೆ. ಇಂತಹ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಕೈಹಾಕಿದರೆ ಮೀಸಲಾತಿಯಿಂದ ಭೋವಿ ಲಂಬಾಣಿ ಕೊರಮ, ಕೊರಚ ಜನಾಂಗಗಳು ವಂಚಿತಗೊಂಡು ಗುಲಾಮಗಿರಿಯ ಬದುಕು ನಡೆಸಬೇಕಾಗುತ್ತದೆ ಮತ್ತು ನಮ್ಮ ಮಕ್ಕಳ ಪಾಲಿಗೆ ಒಳಮೀಸಲಾತಿ ವರ್ಗೀಕರಣ ಮರಣ ಶಾಸನವಾಗಿ ಪರಿಣಮಿಸಲಿದೆ ಎಂದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡಿ: ಕುಲಸಚಿವ ಡಾ. ಎ.ಚನ್ನಪ್ಪ

ಸುದ್ದಿಗೋಷ್ಟಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ ಹಿರೇಮನಿ, ಮುತ್ತುರಾಜ ಮಾಕಡವಾಲೆ, ಕೊರಚ ಸಮಾಜದ ರಾಜ್ಯಾಧ್ಯಕ್ಷ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ.ವೆಂಕಟೇಶ, ರಾಜ್ ಮಹಿಳಾ ಅಧ್ಯಕ್ಷ ಸುಶೀಲಮ್ಮ, ಸಮಾಜದ ಮುಖಂಡ ಮಲೇಶ ಮುನವಳ್ಳಿ, ಭೀಮಸಿ ನೆಮಿಕಲ್ಲ, ಕಾಶಪ್ಪ ಹಿರೇಮನಿ, ತಿಮ್ಮಣ್ಣಾ ಹಿರೇಮನಿ, ಮಂಜುನಾಥ ಹಳ್ಯಾಳ ಮತ್ತು ಶ್ರೀನಿವಾಸ ಅವರೋಳ್ಳಿ ಸೇರಿದಂತೆ ಭೋವಿ ಯುವವೇದಿಕೆ, ಬಂಜಾರ ಸಮಾಜ, ಕೊರಮ-ಕೊರಚ ಸಮಾಜದ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X