ಧಾರವಾಡ | ದಲಿತ ಯುವಕನ ಕೈ ಕತ್ತರಿಸಿದವರನ್ನು ಕೂಡಲೇ ಗಡಿಪಾರು ಮಾಡಲು ದಸಂಸ ಆಗ್ರಹ

Date:

Advertisements

ಕನಕಪುರ ತಾಲೂಕಿನ ದಲಿತ ಯುವಕ ಅನೀಶ್ ಮೇಲೆ ನಡೆದ ದೌರ್ಜನ್ಯಕ್ಕೆ ಸೂಕ್ತ ನ್ಯಾಯ ಒದಗಿಸಿ ಆರೋಪಿಗಳಿಗೆ ಗಡಿಪಾರು ಶಿಕ್ಷೆ ಒದಗಿಸಬೇಕು ಎಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯು ಶುಕ್ರವಾರ ಸಂಶಿ ಗ್ರಾಮದ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ನಂತರ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸಂಘಟನೆಯ ಉಪಾಧ್ಯಕ್ಷ ಶಿವಪ್ಪ ಮುಡ್ಸಿಬಣ, “ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಳಗಾಳು ಗ್ರಾಮದಲ್ಲಿ ಪರಿಶಿಷ್ಠರ ಎನ್.ಕೆ. ಕಾಲೋನಿಗೆ ನುಗ್ಗಿ ಅನೀಶ್ ಎಂಬ ದಲಿತ ಯುವಕನ ಕೈ ಕತ್ತರಿಸಿ ದೈಹಿಕ ದೌರ್ಜನ್ಯ ಎಸಗಿದ್ದಾರೆ. ಒಕ್ಕಲಿಗ ಸಮಾಜದ ಹರ್ಷ ಅಲಿಯಾಸ್ ಕೈಮ ಕರುಣೇಶ, ರಾಹುಲ್, ಶಿವ, ಸುಬ್ಬ, ದರ್ಶನ ಇವರನ್ನು ಕೂಡಲೇ ಗಡಿಪಾರು ಮಾಡದಿದ್ದಲ್ಲಿ ದಲಿತ ಸಂಘರ್ಷಣಾ ಸಮಿತಿಯಿಂದ ಹೋರಾಟ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ದಲಿತರ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ನಿರಂತರವಾಗಿ ಮೇಲ್ವರ್ಗದವರಿಂದ ದಲಿತ ತುಳಿತಕ್ಕೆ ಒಳಗಾಗುತ್ತಲೇ ಇದ್ದಾರೆ. ಇನ್ನಾದರೂ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಮಾಡಿದ ಸಮಾಜದವರು ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ದಲಿತ ಯುವಕನಿಗೆ ಸೂಕ್ತ ಪರಿಹಾರ ನೀಡಬೇಕು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ತುಮಕೂರು | ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ‘ಡಿ’ ಗ್ರೂಪ್ ನೌಕರರೇ ಹಾಸ್ಟೆಲ್ ವಾರ್ಡನ್‌ಗಳು!

ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಪ್ಪ ಮುಡ್ಸಿಬಣ, ಪರಮೇಶ ರವಡೂರ, ಕುಮಾರ್ ಬೆಳವಡಿ, ಶ್ರೀಧರ ಕೋಟಿ, ಮಲ್ಲಿಕಾರ್ಜುನ ಕೋಟಿ, ಮೈಲಾರಿ ಕೋಟಿ, ಮಹಾಂತೇಶ ಕಲ್ಲಾರಿ, ಈರಣ್ಣ ಕಾಳಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X