ಧಾರವಾಡ | ಒಂದೇ ಬಾರಿಗೆ 45 ಮಂದಿ ಆರೋಪಿಗಳ ಗಡಿಪಾರು ಆದೇಶ

Date:

Advertisements

ಹುಬ್ಬಳ್ಳಿ-ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ ಬಾರಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ.

ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು, “ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ನಡೆದಿರುವ ಕೊಲೆ, ಸುಲಿಗೆ, ಕೊಲೆಗೆ ಪ್ರಯತ್ನ, ಸರಗಳ್ಳತನ, ಮಾದಕ ವಸ್ತು ಮಾರಾಟ/ಸೇವನೆ, ಭೂ ಮಾಫಿಯಾ, ಮಹಿಳೆ ಮತ್ತು ವಿದ್ಯಾರ್ಥಿನಿಯರ ಅಪಹರಣ, ಚುಡಾಯಿಸುವುದು ಅಲ್ಲದೆ ಸಂಘಟಿತ ಅಪರಾಧಗಳಾದ ಮಟಕಾ, ಗ್ಯಾಂಬ್ಲಿಂಗ್‌, ಕ್ರಿಕೆಟ್‌ ಬೆಟ್ಟಿಂಗ್‌ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಪುಂಡ ಹುಡುಗರ/ರೌಡಿ, ಜನರ ಗುಂಪು ಕಟ್ಟಿಕೊಂಡು ತಿರುಗಾಡುತ್ತ ಸಾರ್ವಜನಿಕರಲ್ಲಿ ಭಯಭೀತಿಯನ್ನು ಹುಟ್ಟುಹಾಕಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಬಲ್ಲ ಹಾಗೂ ಅಪಾಯಕಾರಿ ಮನುಷ್ಯರಾಗಿ ಸಮಾಜಕ್ಕೆ ಗಂಡಾಂತರಕಾರಿಯಾಗಿರುವ ಆರೋಪಿಗಳ ವಿರುದ್ಧ ಮುಂಜಾಗೃತಾ ಕ್ರಮದ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡರಿಂದ ಮೂರು ತಿಂಗಳಿಂದ ಸ್ಥಳೀಯ ಅಧಿಕಾರಿಗಳೊಂದಿಗೆ ಆರೋಪಿಗಳ ವಿರುದ್ಧ ಇರುವ ಪ್ರಕರಣಗಳನ್ನು ವಿಮರ್ಶೆ ಮಾಡಿದ್ದು, ಆರೋಪಿತರನ್ನು ಗಡಿಪಾರು ಮಾಡುವ ಅವಶ್ಯಕತೆ ಎದುರಾಗಿದೆ” ಎಂದು ತಿಳಿಸಿದರು.

“ಕರ್ನಾಟಕ ಪೊಲೀಸ್‌ ಕಾಯ್ದೆ-1963 ಕಲಂ 55 ಮತ್ತು 56ರ ಅಡಿಯಲ್ಲಿ ಕ್ರಮ ಕೈಗೊಂಡಿದ್ದು, ಕಾನೂನು ಸುವ್ಯವಸ್ತೆ ಕಾಪಾಡಲು ಮಾದಕ ವಸ್ತುಗಳ ಮುಕ್ತ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಕ್ರಮ ಕೈಗೊಂಡಿದ್ದು, ಗಡಿಪಾರು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

Advertisements

“ಗಡಿಪಾರು ವ್ಯಕ್ತಿಗಳ ನಿರ್ದಿಷ್ಟ ಅವಧಿಗೆ ಇದ್ದು, ಗಡಿಪಾರು ವ್ಯಕ್ತಿಗಳ ಚಲನವಲನ ಮತ್ತು ಅವರ ಕಾರ್ಯಚಟುವಟಿಕೆಗಳ ಮೇಲೆ ಸೂಕ್ತ ನಿಗಾವಹಿಸಿ ಈ ಕಚೇರಿಗೆ ಮಾಹಿತಿ ತಿಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಗಡಿಪಾರಾದ ವ್ಯಕ್ತಿಗಳು ನಗರದಲ್ಲಿ ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ ಮನೆಯ ಅಕ್ಕಪಕ್ಕದವರು, ಸ್ಥಳೀಯ ಪೊಲೀಸ್‌ ಠಾಣೆಗಳಿಗೆ ನಗರ ನಿಸ್ತಂತು ಕೊಠಡಿ(ಫೋನ್‌ ನಂಬರ್‌ 100, 2233555) ಹಾಗೂ 112 ವಾಹನಕ್ಕೆ ತಿಳಿಸುವ ಜವಾಬ್ದಾರಿಯಾಗಿರುತ್ತದೆ. ಈ ಪ್ರಕ್ರಿಯೆಗೆ ನಿಮ್ಮ ಸಹಕಾರವೂ ಕೂಡಾ ಅವಶ್ಯವಿರುತ್ತದೆ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶ : ಎಸ್ಪಿ ಪ್ರದೀಪ ಗುಂಟಿ

ಧಾರವಾಡದ ಚೇತನ ಮೇಟಿ, ಅಡ್ಡ ಸೊಹೈಲ್, ಹುಬ್ಬಳ್ಳಿ ಹೊಸೂರಿನ ರಾಹುಲ ಪ್ರಭು ಸೇರಿದಂತೆ 45 ಮಂದಿ ಆರೋಪಿಗಳ ಹಿನ್ನೆಲೆಯ ಮೇರೆಗೆ ಆದೇಶವನ್ನು ಪೋಟೊ ಸಹಿತ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಗಡಿಪಾರು ಮಾಡಿರುವವರು ಕಂಡುಬಂದರೆ, ಮಾಹಿತಿ ನೀಡುವಂತೆಯೂ ಕೋರಿರುವ ಪೊಲೀಸರು, ಸಾರ್ವಜನಿಕ ವಲಯದಲ್ಲಿ ಪದೇ ಪದೆ ತೊಂದರೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X