ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

Date:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು ಧಾರವಾಡದ ಕುಂದಗೋಳ ಠಾಣೆ ಪೋಲಿಸರು ಬಂಧಿಸಿದ್ದಾರೆ.

ಕುಂದಗೋಳ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬಾತ ಬಂಧಿತ ಯುವಕ. ಈತ ಫೇಸ್‌ಬುಕ್‌ನಲ್ಲಿ ಶಿವಾಜಿಯ ಕುರಿತು “ಬಿಜೆಪಿಯ ಹಿಂದುತ್ವ ಹೆಸರಿನಲ್ಲಿನ ಭಯೋತ್ಪಾದಕರ ಆರಾಧ್ಯ ದೈವ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಎಂಟು ಜನ ಪತ್ನಿಯರ ಹೆಸರು. ಸಯೀ ಬಾಯಿ, ಸೋಯಿರಾಬಾಯಿ, ಸುಗುಣಬಾಯಿ, ಸರವಾರಬಾಯಿ, ಕಾಶೀಬಾಯಿ, ಗುಣವಂತಾಬಾಯಿ, ಲಕ್ಷ್ಮೀಬಾಯಿ, ಪುತಳಾಬಾಯಿ. ಬಹುಪತ್ನಿತ್ವ ಒಂದೇ ಧರ್ಮದಲ್ಲಿ ಮಾತ್ರ ಇದೆ ಎಂದು ವಾದಿಸುವ ಮೋದಿ ಗುಲಾಮರ ಗಮನಕ್ಕೆ” ಎಂದು ಬರೆದುಕೊಂಡಿದ್ದ.

ಜೂನ್‌ 6 ರಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದು, ಹಿಂದೂಪರ ಸಂಘಟಕರು ಮತ್ತು ಛತ್ರಪತಿ ಶಿವಾಜಿ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿ ಮರಾಠಾ ಸಮಾಜದ ಮುಂಖಡ ವಿಠ್ಠಲ ಚವ್ಹಾಣ, ಛತ್ರಪತಿ ಶಿವಾಜಿ ಅಭಿಮಾನಿಗಳು, ಯುವಕನ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದರು.‌ ಅದರ ಆಧಾರದ ಮೇಲೆ ಪೋಲಿಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...