ಧಾರವಾಡ | ಸಂವಿಧಾನದ ಜಾಗೃತಿ ಅಭಿಯಾನ ಅನುಷ್ಠಾನದಲ್ಲಿ ಅಗ್ರಸ್ಥಾನ

Date:

Advertisements

ಸಂವಿಧಾನದ ಜಾಗೃತಿ ಅಭಿಯಾನವನ್ನು ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಅಗ್ರಸ್ಥಾನದಲ್ಲಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಗಣರಾಜ್ಯೋತ್ಸವ ದಿನದಂದು ಇಡೀ ರಾಜ್ಯದಲ್ಲಿ ಆರಂಭಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಾಗಿತ್ತು. ಈ ಜಾಥಾವು ಜಿಲ್ಲೆಯ 72 ಗ್ರಾಮ ಪಂಚಾಯಿತಿಗಳು ಮತ್ತು 16 ವಾರ್ಡ್‌ಗಳಲ್ಲಿ ಸಂಚರಿಸಿದೆ.

ರಾಜ್ಯದ 31 ಜಿಲ್ಲೆಗಳ ಪೈಕಿ ಧಾರವಾಡ 700ಕ್ಕೆ 600 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಕೋಲಾರ 210 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಬಾಗಲಕೋಟೆ 200, ಬೆಳಗಾವಿ 180 ಹಾಗೂ ಕಲಬುರಗಿ 180 ಅಂಕ ಪಡೆದಿವೆ. ಮಂಡ್ಯ, ಯಾದಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಶೂನ್ಯ ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements

ಬಿ. ಆರ್. ಅಂಬೇಡ್ಕರ್ ಅವರ 15 ಅಡಿ ಎತ್ತರದ ಭಾವಚಿತ್ರ ಹಾಗೂ ದೊಡ್ಡ ಎಲ್‌ಇಡಿ ಪರದೆ ಹೊತ್ತ ವಾಹನ ಜಿಲ್ಲೆಯಲ್ಲಿ ಸಂಚರಿಸುತ್ತಿದೆ. ಸಂವಿಧಾನದ ಮುನ್ನುಡಿ ಮತ್ತು ಮುಖ್ಯ ಲಕ್ಷಣಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತಿದೆ.

ಜಾಥಾದಲ್ಲಿ ತಜ್ಞರಿಂದ ಉಪನ್ಯಾಸ, ಕ್ಯಾಂಡಲ್ ಮತ್ತು ಟಾರ್ಚ್ ಲೈಟ್ ಮೆರವಣಿಗೆ, ಸಾಂಸ್ಕೃತಿಕ ತಂಡಗಳಿಂದ ಸಂಗೀತ ಮತ್ತು ನೃತ್ಯದ ಜೊತೆಗೆ ಶಾಲಾ- ಕಾಲೇಜುಗಳಲ್ಲಿ ಸಂವಿಧಾನದ ಕುರಿತು ಸ್ಪರ್ಧೆಗಳು ಮತ್ತು ಸಂವಿಧಾನದ ಮುಖ್ಯಾಂಶಗಳ ಕುರಿತು ಪವರ್ ಪಾಯಿಂಟ್ ಮೂಲಕ ವಿವರಣೆ ನೀಡಲಾಗುವುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X