ಧಾರವಾಡ | ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರಗಳು ಆರಂಭ

Date:

2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ರೂ. 5,875 ರಂತೆ ಧಾರವಾಡ ಜಿಲ್ಲೆಯಲ್ಲಿ ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕಪೋರ್ಸ್ ಸಮಿತಿಯ ಅಧ್ಯಕ್ಷ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 80 ದಿನಗಳವರೆಗೆ ಅಂದರೆ 2026 ಜನವರಿ 29ರಿಂದ 2026 ಏಪ್ರಿಲ್ 18 ರವರೆಗೆ ಹಾಗೂ ಉತ್ಪನ್ನ ಖರೀದಿಸಲು 90 ದಿನಗಳವರೆಗೆ ಅಂದರೆ ಜನವರಿ 29 ರಿಂದ ಏಪ್ರಿಲ್ 28 ರವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಡಲೆಕಾಳು ಖರೀದಿ ಕೇಂದ್ರಗಳ ವಿವರ:
ಧಾರವಾಡ ತಾಲೂಕಿನ ಟಿ.ಎ.ಪಿ.ಸಿ.ಎಮ್.ಎಸ್ (ದೂ:9916259625), ಉಪ್ಪಿನಬೇಟಗೇರಿ ಪಿ.ಕೆ.ಪಿ.ಎಸ್ (ದೂ.:9620048221), ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಟಿ.ಎ.ಪಿ.ಸಿ.ಎಮ್.ಎಸ್ (ದೂ: 6360506861), ಕೋಳಿವಾಡ ಪಿ.ಕೆ.ಪಿ.ಎಸ್ ಕೋಳಿವಾಡ ನಂ-1(ದೂ: 9945846878), ಹೆಬಸೂರ ಪಿ.ಕೆ.ಪಿ.ಎಸ್ (ದೂ: 9945894870), ನೂಲ್ವಿ ಪಿ.ಕೆ.ಪಿ.ಎಸ್ (ದೂ: 9900896952), ಹಳೇ ಹುಬ್ಬಳ್ಳಿ ಪಿ.ಕೆ.ಪಿ.ಎಸ್ (ದೂ: 9448424876), ನವಲಗುಂದ ತಾಲೂಕಿನ ಹೆಬ್ಬಾಳ ಪಿ.ಕೆ.ಪಿ.ಎಸ್ (ದೂ. 9449065613), ತಿರ್ಲಾಪೂರ ಪಿ.ಕೆ.ಪಿ.ಎಸ್ (ದೂ: 8494801475), ಆರೇಕುರಹಟ್ಟಿ ಪಿ.ಕೆ.ಪಿ.ಎಸ್ (ದೂ. 9845822903), ಶಿರೂರ ಮೊರಬಶಿರೂರ ಎಫ್.ಪಿ.ಓ (ದೂ:9380871883), ಮೊರಬ ಕೆ.ಎಸ್.ಎಫ್.ಪಿ.ಓ (ದೂ: 9620107330), ಮೊರಬ ಪಿ.ಕೆ.ಪಿ.ಎಸ್ (ದೂ: 7204821271), ಹಾಳಕುಸುಗಲ್ ಪಿ.ಕೆ.ಪಿ.ಎಸ್ (ದೂ: 8123836380), ನವಲಗುಂದ ಪಿ.ಕೆ.ಪಿ.ಎಸ್ (ದೂ: 9886491644), ಬೆಳವಟಗಿ ಪಿ.ಕೆ.ಪಿ.ಎಸ್ (ದೂ:6363463089), ನವಲಗುಂದ ಟಿ.ಎ.ಪಿ.ಸಿ.ಎಮ್.ಎಸ್ ಅಣ್ಣಿಗೇರಿ (ದೂ: 8861008191), ಅಣ್ಣಿಗೇರಿ ತಾಲೂಕಿನ ಅಣ್ಣಿಗೇರಿ ಪಿ.ಕೆ.ಪಿ.ಎಸ್ (ದೂ: 7760184669), ಅಣ್ಣಿಗೇರಿ ತಾಲೂಕು ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಲಿಮಿಟೆಡ್ ಅಣ್ಣಿಗೇರಿ (ದೂ: 9731041200), ಕುಂದಗೋಳ ತಾಲೂಕಿನ ಯರಗುಪ್ಪಿ ಪಿ.ಕೆ.ಪಿ.ಎಸ್ (ದೂ: 9845169206), ಯಲಿವಾಳ ಪಿ.ಕೆ.ಪಿ.ಎಸ್ (ದೂ: 9945163891), ಕುಂದಗೋಳ ಪಿ.ಕೆ.ಪಿ.ಎಸ್ (ದೂ: 9845169206), ಯರೇಬೂದಿಹಾಳ ಪಿ.ಕೆ.ಪಿ.ಎಸ್ (ದೂ:9742553167), ಸಂಶಿ ಎಫ್.ಪಿ.ಓ ಕುಂದಗೋಳ (ದೂ: 7411512065), ಕುಬಿಹಾಳ ಪಿ.ಕೆ.ಪಿ.ಎಸ್ (ದೂ: 9880414263) ಖರೀದಿ ಕೇಂದ್ರಗಳಾಗಿವೆ.

ಉತ್ಪನ್ನವನ್ನು ಖರೀದಿಸಲು ಅಗತ್ಯವಿರುವ ದಾಖಲೆಗಳು:
ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ.

ಕಡಲೆಕಾಳು ಖರೀದಿಸಲು ಅನುಸರಿಸುವ ಕ್ರಮಗಳು:
ಕಡಲೆಕಾಳು ಉತ್ಪನ್ನದ ಎಫ್.ಎ.ಕ್ಯೂ ಗುಣಮಟ್ಟ ಅಂದರೆ ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ.12 ಕ್ಕಿಂತ ಕಡಿಮೆ ಇರಬೇಕು. ಕಡಲೆಕಾಳು ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು.ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು. ರೈತರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ನೀಡುವ ಗೋಣಿ ಚೀಲದಲ್ಲಿ 50 ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಕಡಲೆಕಾಳು ಪ್ರತಿ ಎಕರೆಗೆ 04 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್ ಪ್ರಮಾಣದ ಎಫ್‍ಎಕ್ಯೂ ಗುಣಮಟ್ಟದ ಉತ್ಪನ್ನವನ್ನು ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‍ಗೆ ರೂ.5,875 ರಂತೆ ಕಡಲೆಕಾಳನ್ನು ಖರೀದಿಸಲಾಗುವುದು.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕುಂದಗೋಳ ಮತ್ತು ಅಣ್ಣಿಗೇರಿ ತಾಲೂಕಾ ತಹಶೀಲ್ದಾರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಹುಬ್ಬಳ್ಳಿ ಶಾಖೆಯ ಕ.ರಾ.ಸ.ಮಾ.ಮ.ಮಂಡಳ (ದೂರವಾಣಿ ಸಂಖ್ಯೆ:0836-2004419)  ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...