ಧಾರವಾಡ | ಬೆಳೆ ನಾಶ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಬಿತ್ತನೆ ಮಾಡಿರುವ ಬೆಳೆಗೆ ದನಕರುಗಳನ್ನು ಬಿಟ್ಟು ನಾಶ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯರಿಕೊಪ್ಪ ಗ್ರಾಮದ ರೈತರು ಒತ್ತಾಯಿಸಿದ್ದಾರೆ.

ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಹಸು ಮೇಯಿಸಲು ಬರುವ ಕಿಡಿಗೇಡಿಗಳು ಹಾಗೂ ದನಗಳ ಮಾಲಿಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

“ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ ರೈತರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪಸ್ವಲ್ಪ ಬಂದ ಮಳೆ ಹಾಗೂ ಬೋರ್‌ವೆಲ್ ನೀರಿನ ಸಹಾಯದಿಂದ ಯರಿಕೊಪ್ಪ ಗ್ರಾಮಸ್ಥರು ತಮ್ಮ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ಬೆಳೆಗೆ ಕಿಡಿಗೇಡಿಗಳು ದನಕರುಗಳನ್ನು ಬಿಟ್ಟು ಬೆಳೆನಾಶ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮನರೇಗಾ ಯೋಜನೆಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯ

“ಬೆಳೆ ಮೊಳಕೆ ಒಡೆದು ಮೇಲೇಳುತ್ತಿರುವ ಸಂದರ್ಭದಲ್ಲಿ ಗ್ರಾಮದ ಹತ್ತಿರದಲ್ಲಿರುವ ತಡಸಿನಕೊಪ್ಪದ ದನಕರಗಳು ನಮ್ಮ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಯನ್ನು ಹಾನಿ ಮಾಡುತ್ತಿವೆ. ಹಾಗಾಗಿ ಅಕ್ಕಪಕ್ಕಾ ಗ್ರಾಮದ ಜಾನುವಾರು ಸಾಕಾಣಿಕೆದಾರರಿಗೆ ತಿಳಿಹೇಳಿ ನಮ್ಮ ಬೆಳೆ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

“ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ತೋರಿದರೆ ಮುಂದೆ ಆಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರು” ಎಂದು ಎಚ್ಚರಿಕೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X