ಧಾರವಾಡ | ಮಧ್ಯಂತರ ಬೆಳೆ ವಿಮೆ & ಸಾಲಮನ್ನಾಕ್ಕೆ ರೈತರ ಆಗ್ರಹ

Date:

Advertisements

ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಸಾವಿರಾರು ಎಕರೆಗಳಲ್ಲಿ ಬೆಳೆದ ಬೆಳೆ ನಾಶವಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲು ಹಾಗೂ ರೈತರ ಸಾಲ ಮನ್ನಾ ಮಾಡಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.

ಜಿಲ್ಲೆಯ ಕಲಘಟಗಿ, ಕುಂದಗೋಳ, ಅಳ್ಳಾವರ, ಅಣ್ಣಿಗೇರಿ, ನವಲಗುಂದ ಹಾಗೂ ಧಾರವಾಡ ಗ್ರಾಮೀಣ ಭಾಗಗಳಲ್ಲಿ ಸೋಯಾಬಿನ್, ಉದ್ದು, ಗೋವಿನ ಜೋಳ, ಉಳ್ಳಾಗಡ್ಡಿ, ಹತ್ತಿ, ಹೆಸರು ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಈಗಾಗಲೇ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ವಿಮೆ ಕಂತುಗಳನ್ನು ಪಾವತಿಸಿರುವುದರಿಂದ, ಸರ್ಕಾರ ತಕ್ಷಣವೇ ಮಧ್ಯಂತರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತರು “ಹಿಂಗಾರು ಬಿತ್ತನೆ ಮಾಡಲು ಹಣವಿಲ್ಲದೆ ನಾವು ಸಂಕಷ್ಟದಲ್ಲಿದ್ದೇವೆ. ಪರಿಹಾರ ಹಣ ಹಾಗೂ ವಿಮೆ ಮೊತ್ತವನ್ನು ತಕ್ಷಣವೇ ಬಿಡುಗಡೆ ಮಾಡದಿದ್ದರೆ ಹುಬ್ಬಳ್ಳಿ–ಧಾರವಾಡ ನಗರ ಬಂದ್ ಮೂಲಕ ಹೋರಾಟ ನಡೆಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ತುರ್ತು ಪರಿಹಾರ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರ ಉದಾಹರಣೆಗಳನ್ನು ಉಲ್ಲೇಖಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಲಾಗಿದೆ.

ಈ ಹೋರಾಟಕ್ಕೆ ರಾಜ್ಯ ಸಂಚಾಲಕ ಸಿದ್ದಣ್ಣ ತೇಜಿ, ಜಿಲ್ಲಾಧ್ಯಕ್ಷ ರವಿರಾಜ ಕಂಬಳಿ ಮತ್ತು ರೈತ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X