ಧಾರವಾಡ | ವಿದ್ಯಾಭ್ಯಾಸದ ಜತೆಗೆ ವೃತ್ತಿಗಳ ಕಡೆಗೊ ಗಮನವಿರಲಿ: ಡಾ ನಾಲತವಾಡ

Date:

Advertisements

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ವೃತ್ತಿಗಳ ಕಡೆಗೊ ಗಮನ ಹರಿಸಬೇಕು ಎಂದು ಡಾ ನಾಲತವಾಡ ಅವರು ಸಲಹೆ ನೀಡಿದರು.

ಧಾರವಾಡ ನಗರದ ಹಜರತ್ ನಿಜಾಮುದ್ದೀನ್ ಪ್ರೌಢಶಾಲೆ ಹಾಗೂ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ ಆಯೋಜಿಸಿದ್ದ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಮೊಹಮ್ಮದ್ ಅಫ್ಜಲ್ ಸವಣೂರು ಮಾತನಾಡಿ, ಎಎಂಪಿ ದೇಹ ಉದ್ದೇಶ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ತಿಳಿಸಿ ವೈದ್ಯಕೀಯ ವಿಭಾಗದಲ್ಲಿರುವ ವೃತ್ತಿ ಅವಕಾಶಗಳ ಬಗ್ಗೆ ವಿವರಿಸಿದರು. ಡಾ. ಮುಸದ್ದಿಕಾ ಖಾನಂ ಕಿತ್ತೂರ್, ಮಾನಸಿಕ ಸಂತೋಲನ ಹಾಗೂ ವಿದ್ಯಾಭ್ಯಾಸದ ಕುರಿತು ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಅಫ್ತಾಬ್ ಅತ್ತಾರ್, ಸ್ಟಡಿ ಟೆಕ್ನಿಕ್ಸ್ ವಿಷಯದ ಕುರಿತು ಮಾಹಿತಿ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಉಪಾಧ್ಯಕ್ಷ ಇಸ್ಮಾಯಿಲ್ ತಾಡಪತ್ತರಿ, ಎಎಂಪಿ ವತಿಯಿಂದ ಬಂದಂತಹ ಎಲ್ಲ ಸಂಪನ್ಮೂಲ ವ್ಯಕ್ತಿಗಳಿಗೆ ಧನ್ಯವಾದ ವ್ಯಕ್ತಪಡಿಸಿ ಇಂಥ ಕಾರ್ಯಕ್ರಮಗಳು ಮತ್ತೆ ಮತ್ತೆ ನಡೆಯುತ್ತಿರಬೇಕು. ಶಾಲೆಯ ಮುಖ್ಯ ಶಿಕ್ಷಕ ಸಿರಾಜ್ ಅಹಮದ್ ಮನಿಯಾರ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಎಸ್ಎ ಖಲಾಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜನಾಬ್ ಇನಾಮದಾರ್, ಜನಾಬ್ ಮುಳಗುಂದ್, ಇನಾಮದಾರ್, ನದಾಫ್ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X