ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

Date:

Advertisements

ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಹೇಳತೀರದಾಗಿದೆ.

ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಬರುವುದಿಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೇರಳವಾಗಿದೆ.

“ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆಗೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳು ಕಸದ ದುರ್ನಾತದ ಸಮಸ್ಯೆಯಿಂದ ನಲುಗುವಂತಾಗಿದೆ” ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Advertisements

“ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು. ಬೀದಿ ಬದಿಗಳಲ್ಲಿ ಕಸ ಸುರಿಯುವುದನ್ನು ತಪ್ಪಿಸಬೇಕು” ಎಂದು  ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭಿಸಲು ಕಸಾಪ ಆಗ್ರಹ

“ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್‌ಗಳ ಖರೀದಿ ನಿಟ್ಟಿನಲ್ಲಿ ‍ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ” ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X