ಧಾರವಾಡ | ಸರ್ಕಾರದ ಯೋಜನೆಗಳು ನಿರ್ದಿಷ್ಠ ಸಮಯದಲ್ಲಿ ಅರ್ಹ ಪಲಾನುಭವಿಗಳಿಗೆ ತಲುಪಬೇಕು: ದಿವ್ಯಪ್ರಭು

Date:

ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಂಡು ಶೇ.100 ರಷ್ಟು ಗುರಿ ಸಾಧಿಸಬೇಕು. ಬಿಡುಗಡೆಯಾಗಿರುವ ಅನುದಾನವು ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಯೋಜನೆಗಳನ್ನು ನಿರ್ದಿಷ್ಠ ಸಮಯದಲ್ಲಿ ಅರ್ಹ ಪಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

- Advertisement -

ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ 2025-26 ನೇ ಸಾಲಿನ ಅಗಸ್ಟ್ ಮಾಹೆಯ ಅಂತ್ಯದವರೆಗಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಕೃಷಿ ಇಲಾಖೆಯಲ್ಲಿ ಸರಕಾರದ ಯೋಜನೆಗಳನ್ನು ಒಂದು ಬಾರಿ ಯೋಜನೆಯನ್ನು ಸದುಪಯೋಗ ಪಡೆದುಕೊಂಡ ಫಲಾನುಭವಿಗಳು ಪುನಃ ಆ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ಅರ್ಜಿಗಳನ್ನು ಪರಿಶೀಲಿಸಿ, ಕ್ರಮಕೈಗೊಳ್ಳಬೇಕು. ತೋಟಗಾರಿಕೆ ಮಾಡುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ರೈತರನ್ನು ಗುರುತಿಸಿ, ಸರ್ಕಾರದ ಯೋಜನೆಗಳ ಬಗ್ಗೆ ರೈತರು ಉಪಯೋಗ ಪಡೆದುಕೊಳ್ಳುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ರಸ್ತೆ ಕಾಮಗಾರಿ ಹಾಗೂ ವಿವಿಧ ಕಾಮಗಾರಿಗಳನ್ನು ಮಾಡುವಾಗ ಸರಿಯಾದ ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡು ಹಣ ವ್ಯಯ ಮಾಡದೆ, ಸರಿಯಾಗಿ ಯೋಜನೆಯನ್ನು ರೂಪಿಸಿಕೊಂಡು ಅನುದಾನ ಉಪಯೋಗಿಸಿ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಸರಿಯಾಗಿ ವಿತರಣೆ ಮಾಡಿ ಮತ್ತು ಸರ್ಕಾರ ಪೌಷ್ಟಿಕ ಆಹಾರ ವಿತರಣೆ ಮಾಡುವ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಸರ್ಕಾರದ ನಿರ್ದೇಶನದಂತೆ ಮಕ್ಕಳಿಗೆ 14 ವರ್ಷ ಕಡ್ಡಾಯ ಶಿಕ್ಷಣ ಇದರಲ್ಲಿ ಎಷ್ಟು ವಿದ್ಯಾರ್ಥಿಗಳು ಶಾಲೆಯಿಂದ ಹಿಂದುಳಿದ್ದಾರೆ ಅವರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಿ. ಅಂತಹ ಮಕ್ಕಳನ್ನು ಸಹ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯಾವ ಮಕ್ಕಳು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು.

ಮದರಸಗಳನ್ನು ಭೇಟಿ ಮಾಡಿ ಅವರ ಸಹಾಯವನ್ನು ಸಹ ತೆಗೆದುಕೊಂಡು ಡ್ರಾಪೌಟ್ ಆದ ಮಕ್ಕಳನ್ನು ಗುರುತಿಸಿ ಹಾಗೂ ಕ್ರಿಶ್ಚಿಯನ್ ಶಾಲೆಗಳಿಗೂ ಸಹ ಭೇಟಿ ನೀಡಬೇಕು. ಹೆಸ್ಕಾಂ ಇಲಾಖೆಯವರು ಮಳೆಗಾಲದಲ್ಲಿ ಬಿದ್ದಿರುವ ಹಾಗೂ ಬಾಗಿರುವ ಕಂಬಗಳನ್ನು ಆದಷ್ಟು ಬೇಗ ಸರಿಪಡಿಸಿ ಮತ್ತು ಯಾವ ಅರ್ಜಿಗಳು ಬಂದಿರುತ್ತವೆಯೋ ಅವುಗಳನ್ನು ಸರಿಯಾದ ಸಮಯದಲ್ಲಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2025 ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆ ಮತ್ತು ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಮುಖ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ ವೇದಿಕೆಯಲ್ಲಿ ಇದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜುಬಲಿ ವೃತ್ತದಲ್ಲಿ ಪ್ರತಿಭಟನೆ

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ. ಪಿ. ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು, ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರಿ ವಕೀಲರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...