ಧಾರವಾಡ | ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ ವಿತರಿಸುವಂತೆ ಗ್ರಾಕೂಸ ಆಗ್ರಹ

Date:

Advertisements

ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ, ಅಡುಗೆ ಎಣ್ಣೆ ಮತ್ತು ಬೇಳೆ ನೀಡುವುದು ಹಾಗೂ ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಕಾರ್ಮಿಕ ಚೀಟಿ ನೀಡುವಂತೆ ಕಲಘಟಗಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಲಘಟಗಿ ಗ್ರಾಕೂಸ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಗ್ರಾಕೂಸ ಸಂಚಾಲಕಿ ನಿಂಗಮ್ಮ ಸವಣೂರ ಮಾತನಾಡಿ, “ರೈತರ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ, ಪೌಷ್ಠಿಕಾಂಶದ ಕೊರತೆ ನೀಗುವುದಕ್ಕಾಗಿ ಆಯಾಯ ಪ್ರದೇಶಕ್ಕನುಗುಣವಾಗಿ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ಜೋಳ ಅಥವಾ ಸ್ಥಳೀಯ ಆಹಾರ ಧಾನ್ಯ, 1 ಕೆಜಿ ತೊಗರಿಬೇಳೆ, 1 ಕೆಜಿ ಅಡುಗೆ ಎಣ್ಣೆ ಅನುಕೂಲಕರ ದರದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಲ್ಪಿಸುವಂತಾಗಬೇಕು” ಎಂದು ಆಗ್ರಹಿಸಿದರು.

Advertisements

“ಸ್ಥಳೀಯ ಆಹಾರ ಧಾನ್ಯಗಳನ್ನು ವಿತರಣೆ ಮಾಡುವುದರಿಂದ ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆಯ ಲಭ್ಯತೆ, ಗ್ರಾಮೀಣ ಭಾಗದಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಪ್ರೋತ್ಸಾಹ, ಕಾರ್ಮಿಕರಿಗೆ ವಿಶೇಷವಾಗಿ ಅಪೌಷ್ಟಿಕತೆ ಹೆಚ್ಚುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಅಪೌಷ್ಠಿಕತೆ ನೀಗಿಸುವ ಪೌಷ್ಟಿಕ ಆಹಾರವೂ ಸಿಕ್ಕಂತಾಗುತ್ತದೆ. ಆಗ ಮಾತ್ರ ಆಹಾರ ಭದ್ರತೆಗೆ ಸರಿಯಾದ ಅರ್ಥ ಬರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

“ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ 90 ದಿನಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಬಿಒಸಿಡಬ್ಲ್ಯೂ ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕು. ಉದ್ಯೋಗ ಖಾತ್ರಿಯಲ್ಲಿ ಹೆಚ್ಚುವರಿ 100 ದಿನ ಮಾನವ ದಿನಗಳ ಕೆಲಸ ನೀಡಬೇಕು. ಇವೆರಡೂ ಅಪೌಷ್ಠಿಕತೆ ನೀಗಿಸುವ ಆಹಾರ ಭದ್ರತೆ, ಆರೋಗ್ಯ, ಶಿಕ್ಷಣದಂಥ ಸಾಮಾಜಿಕ ಭದ್ರತೆ ನೀಡುವ ಯೋಜನೆಗಳಾಗಿದ್ದು, ರೈತರ ಮತ್ತು ಕಾರ್ಮಿಕರಿಗೆ ಏಕಕಾಲಕ್ಕೆ ಪ್ರಯೋಜನ ದೊರಕಲಿರುವ ಜನಪರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X