ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಬೆಣ್ಣಿಹಳ್ಳ ಪ್ರವಾಹದ ಆತಂಕದಲ್ಲಿ ನೀರಿನ ನಡುಗಡ್ಡೆಯ ಮಧ್ಯೆಯೇ ಕುಟುಂಬ ಸಿಲುಕಿಕೊಂಡಿತ್ತು, ಎರಡು ಮಕ್ಕಳ ಜತೆ ದಂಪತಿ ಜೀವ ಕೈಯಲ್ಲಿ ಹಿಡಿದುಕೊಂಡು ನಿಂತಿದ್ದರು. ಜಿಲ್ಲಾಡಳಿತ, ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಮೂಲಕ ನಡುಗಡ್ಡೆಯಲ್ಲಿ ಸಿಲುಕಿದ್ದ ಒಂದು ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ
ಧಾರವಾಡ ಗ್ರಾಮೀಣ ಪ್ರದೇಶ ಸೇರಿದಂತೆ ಹುಬ್ಬಳ್ಳಿ ಗ್ರಾಮೀಣ, ಅಣ್ಣಿಗೇರಿ ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮನೆಗಳಿಗೆ ನೀರು ನುಗ್ಗಿದ್ದು, ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಯಮನೂರು ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಬೆಣ್ಣೆ ಹಳ್ಳದ ನೀರಿನ ಪ್ರಮಾಣ ಹೆಚ್ಚಾಗಿದೆ.