ಧಾರವಾಡ | ಖರ್ಗೆ ಪ್ರಧಾನಿಯಾದರೆ ಬಸವ ರಾಜ್ಯ ನಿರ್ಮಾಣ ಖಂಡಿತ; ಕೆಪಿಸಿಸಿ ವಕ್ತಾರ ವಿಶ್ವಾಸ

Date:

Advertisements

ಹಿರಿಯ ಮುತ್ಸದ್ದಿ ರಾಜಕಾರಣಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆದರೆ 12ನೇ ಶತಮಾನದ ಬಸವ ರಾಜ್ಯದ ಆಡಳಿತ ಆರಂಭವಾಗುತ್ತದೆ ಎಂದು ಹಿರಿಯ ಲಿಂಗಾಯತ ಮುಖಂಡ ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಅಭಿಪ್ರಾಯಪಟ್ಟರು.

ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದಾರೆ.

“ಈ ಹಿಂದೆ ಅನೇಕರು ಈ ದೇಶವನ್ನು ನಾವು ಪ್ರಧಾನಿಗಳಾದಾಗ ರಾಮರಾಜ್ಯ ಮಾಡುತ್ತೇವೆ, ರೈತರ ರಾಜ್ಯ ಮಾಡುತ್ತೇವೆಂದು ಘೋಷಣೆ ಕೂಗಿ ಅಧಿಕಾರಕ್ಕೆ ಬಂದು ರಾಮರಾಜ್ಯವನ್ನೂಮಾಡಲಿಲ್ಲ, ರೈತ ರಾಜ್ಯವನ್ನೂ ಮಾಡಲಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸಚಿವ ಸಂಪುಟ ಸಭೆ | ಕಾಲೇಜುಗಳಿಗೆ ನೌಕರರ ನೇಮಕ; ಬುಡಕಟ್ಟು ಪಂಗಡಗಳಿಗೆ ಪೌಷ್ಟಿಕ ಆಹಾರ ಖರೀದಿಗೆ ಒಪ್ಪಿಗೆ

“ಕಲ್ಯಾಣ ಕರ್ನಾಟಕದ ಜಗಜ್ಯೋತಿ ಬಸವಣ್ಣನವರ ಪರಿಸರದಲ್ಲಿ ಬೆಳೆದು ಬಂದ ಮಲ್ಲಿಕಾರ್ಜುನ ಖರ್ಗೆ ಅಪ್ಪಟ ಬಸವವಾದಿಯಾಗಿದ್ದು ಬಸವಣ್ಣನವರ ಕಲ್ಪನೆಯ ಬಸವ ನಾಡು ನಿರ್ಮಿಸುವಲ್ಲಿ ಯಶಸ್ವಿಯಾಗುವ ಎಲ್ಲ ಅರ್ಹತೆ ಪಡೆದಿದ್ದಾರೆ” ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ವಿಶ್ವಾಸ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X