ಧಾರವಾಡ | ಭಾರತ ವಿಭಿನ್ನ ಭಾಷೆ, ಧರ್ಮಗಳಿಂದ‌ ಕೂಡಿದ ವಿಶಾಲ ದೇಶ: ಸೀತಾರಾಮ ಪವಾರ್

Date:

Advertisements

ಭಾರತವು ವಿಭಿನ್ನ ಭಾಷೆಗಳು, ಸಂಸ್ಕೃತಿಗಳು ಹಾಗೂ ಧರ್ಮಗಳಿಂದ ಕೂಡಿದ ಒಂದು ವಿಶಾಲ ದೇಶ. ಇಲ್ಲಿ ಪ್ರತಿಯೊಂದು ಪ್ರಾಂತ್ಯಕ್ಕೂ ತನ್ನದೇ ಆದ ಸಂಸ್ಕೃತಿ ಮತ್ತು ಭಾಷೆಯ ಸೌಂದರ್ಯವಿದೆ. ಇಂತಹ ವೈವಿಧ್ಯಮಯ ರಾಷ್ಟ್ರವನ್ನು ಒಂದು ಏಕತೆಯಲ್ಲಿ ಕಟ್ಟಿಹಾಕುವಲ್ಲಿ ಭಾಷೆಯ ಪಾತ್ರ ಅಪಾರ ಎಂದು ಸೀತಾರಾಮ ಪವಾರ್ ಅಂಜುಮನ್ ಕಾಲೇಜಿನಲ್ಲಿ ನಡೆದ ಹಿಂದಿ‌ ದಿವಸ್ ಕಾರ್ಯಕ್ರಮದಲ್ಲಿ ಹೇಳಿದರು.

ಮುಂದುವರದು ಮಾತನಾಡಿ, ಈ ದಿನದ ಆಚರಣೆಯ ಪ್ರಮುಖ ಉದ್ದೇಶವೆಂದರೆ ಹಿಂದಿಯ ಬಗ್ಗೆ ಜನರಲ್ಲಿ ಗೌರವ, ಹೆಮ್ಮೆ ಮತ್ತು ಅರಿವು ಬೆಳೆಸುವುದಾಗಿದೆ. ಜೊತೆಗೆ ಇತರ ಪ್ರಾದೇಶಿಕ ಭಾಷೆಗಳ ಗೌರವವನ್ನು ಕಾಪಾಡುತ್ತಲೇ ಹಿಂದಿಯನ್ನು ರಾಷ್ಟ್ರದ ಸಾಮಾನ್ಯ ಭಾಷೆಯಾಗಿ ಬೆಳೆಸಬೇಕು ಎಂದರು.

ಡಾ. ಐ. ಎ. ಮುಲ್ಲಾ ಮಾತನಾಡಿ, ಭಾಷೆಯೆಂದರೆ ಕೇವಲ ಸಂವಹನದ ಸಾಧನವಲ್ಲ, ಅದು ಸಂಸ್ಕೃತಿ ಹಾಗೂ ಪರಂಪರೆಯ ಜೀವನಾಡಿ. ಆದ್ದರಿಂದ ಹಿಂದಿ ದಿವಸವು ನಮ್ಮ ದೇಶದ ಭಾಷಾ ಏಕತೆ ಮತ್ತು ರಾಷ್ಟ್ರೀಯ ಏಕೀಕರಣದ ಸಂಕೇತವಾಗಿದೆ. ಇದೇ ವೇಳೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಈ ಸಂದರ್ಭದಲ್ಲಿ ಡಾ. N B ನಾಲತವಾಡ, ಪತ್ರಿಕೋದ್ಯಮದ ಮುಖ್ಯಸ್ಥ ಡಾ. ಎಸ್. ಎಸ್. ಅದೋನಿ, ಪೈರೋಜಾ ಮೇಸ್ತ್ರಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಮೀಮ್ ಕಲ್ಬುರ್ಗಿ ನಿರೂಪಿಸಿದರು. ಹೀನಾ ಕೌಸರ್ ವಂದಿಸಿದರು.ಬ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X