ಧಾರವಾಡ | ಸಂಘಟನೆ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸವಾಗಬೇಕು: ಎಂ.ಬಿ.ನಾಡಗೌಡ

Date:

Advertisements

ಗ್ರಾಮ ಪಂಚಾಯತಿ ನೌಕರರ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಸರ್ಕಾರಗಳು ಎಡವಿದಾಗ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡಗೌಡ ಧಾರವಾಡದಲ್ಲಿ ಹೇಳಿದರು.

ನಗರದ ನಿವೃತ್ತ ನೌಕರರ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯತ್ ನೌಕರರ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಗ್ರಾಮ ಪಂಚಾಯತಿ ನೌಕರರು ಅತ್ಯಂತ ಹೆಚ್ಚಿನ ಸವಲತ್ತುಗಳನ್ನು ಹೊಂದಿರುವುದು ಕರ್ನಾಟಕವಾಗಿದೆ. ಗುಜರಾತ್ ಮಾಡೆಲ್ ಎನ್ನುವುದೆಲ್ಲ ಸುಳ್ಳು. ಗುಜರಾತ್ ಮಾಡಲ್ ಎನ್ನುತ್ತ ನಮ್ಮನ್ನು ಹತ್ತಿಕ್ಕುವ ಕೆಲಸದ ವಿರುದ್ಧ ನಾವು ಗಟ್ಟಿಯಾಗಿ ಸಂಘಟಿತರಾಗಬೇಕು ಎಂದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಮಾತನಾಡಿ, ಕಾರ್ಮಿಕರ ಸಂಘಟನೆಯ ನಿರಂತರವಾಗಿ ಹೋರಾಟದ ಫಲವಾಗಿ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಇನ್ನೂ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲು ಗ್ರಾಮ ಪಂಚಾಯತಿ ನೌಕರರು ಬಲಿಷ್ಠ ಸಂಘಟನೆಯನ್ನು ಬಲಿಷ್ಠಗೊಳಿಸುವುದು ಮುಖ್ಯ ಅಗತ್ಯವಾಗಿದೆ ಎಂದರು.

Advertisements

ನೂತನ ಜಿಲ್ಲಾಧ್ಯಕ್ಷ ಚಂದ್ರಗೌಡ ವೆಂಕನಗೌಡ್ರ, ಉಪಾಧ್ಯಕ್ಷ ಗುರುನಾಥ್ ಹೂಗಾರ, ಚನ್ನಬಸಪ್ಪ ಹೆಬ್ಬಾಳ, ಪ್ರಧಾನ ಕಾರ್ಯದರ್ಶಿ ಮಹೇಶ ಹುಲಗೋಡ, ಕಾರ್ಯದರ್ಶಿ ಪರಶುರಾಮ ಪಾಟೀಲ, ವೀರಭದ್ರಯ್ಯ ಬಣ್ಣದನೂಲಮಠ, ಪದ್ಮರಾಜ ಚೆಂದಪ್ಪನವರ, ಖಜಾಂಚಿ ಈಶ್ವರ ಚಂದೂನವರ ಆಯ್ಕೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಮಂಗನಬಾವು ಸೋಂಕು 130ಕ್ಕೆ ಏರಿಕೆ: ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದೇನು?

ಮಾಜಿ ಜಿಲ್ಲಾಧ್ಯಕ್ಷ ಬಿ.ಐ.ಈಳಿಗೇರ ಪ್ರತಿ ತಾಲೂಕಿನ ಗ್ರಾಮ ಪಂಚಾಯತ್ ನೌಕರರ ಸಭೆ ನಡೆಸಿದ ಕುರಿತು ವಾರ್ಷಿಕ ವರದಿ ಸಲ್ಲಿಸಿದರು. ನಾಗರಾಜ ಮೌಳೆರ ಕಾರ್ಯಕ್ರಮ ನಿರೂಪಿಸಿದರು. ವೀರಪಾಕ್ಷಪ್ಪ ಬಮ್ಮಶೆಟ್ಟಿ ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X