ಧಾರವಾಡ | ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಹೋರಾಟ‌ ಮಾಡಲಿ: ಶಾಸಕ ಕೋನರೆಡ್ಡಿ

Date:

Advertisements

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು ವಾರ ಬರೀ ವಾಲ್ಮಿಕಿ ಹಗರಣ ವಿವಾರವಾಗಿ ಬರಿ ಗದ್ದಲ ಮಾಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿಯವರು ಹೋರಾಟ ಮಾಡಲಿ ಎಂದು ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ ತಿಳಿಸಿದರು.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, “ನಿರಂತರ ಹೋರಾಟದ ಕಿಚ್ಚನ್ನು ಹೊತ್ತಿಸಿದ ನಮ್ಮ ನಾಡಿನಲ್ಲಿ, ಕೇಂದ್ರ ಸರ್ಕಾರವು ಮಹದಾಯಿ ಯೋಜನೆ ಜಾರಿಮಾಡಲು ಕುಂಟು ನೆಪ ಹೇಳುತ್ತಿದೆ. ವನ್ಯಜೀವಿ ಮಂಡಳಿಯ ನೆಪ ಹೇಳುತ್ತ ಮಹದಾಯಿ ಯೋಜನೆಗೆ ಮೀನಮೇಷ ಮಾಡುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಈ ಹಿಂದೆ ದಿ‌ವಂಗತ ಅನಂತಕುಮಾರ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ ಒತ್ತಡ ಹಾಕುತ್ತಿದ್ದರು. ಈಗ ಆ ಜವಾಬ್ದಾರಿ ಪ್ರಹ್ಲಾದ ಜೋಶಿ ತೆಗೆದುಕೊಂಡು ಮಹದಾಯಿಗೆ ಕ್ಲಿಯರೆನ್ಸ್ ಕೊಡಿಸುವ ಕಾರ್ಯ ಮಾಡಬೇಕಿದೆ. ಕೇಂದ್ರ ಸರಕಾರ ಯೋಜನೆ ಜಾರಿ ಮಾಡಬೇಕು ಅಂತ ಮನಸ್ಸು ಮಾಡಿದ್ರೆ ಒಂದು ತಿಂಗಳಲ್ಲಿ ಕೆಲಸ ಮುಗಿಯುತ್ತದೆ. ಹಾಗೇಯೆ ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. ಈಗಲಾದರೂ ಯೋಜನೆ ಜಾರಿಮಾಡುವ ಕಾರ್ಯಕ್ಕೆ ಮುಂದಾಗಬೇಕೆಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಮಳೆ ಬಹಳ ಆಗ್ತಾ ಇದೆ, ನಮಗೆ ಏನು ಪರಿಹಾರ ಕೊಡಬೇಕು ಎಂಬುದರ ಬಗ್ಗೆ ಸಲಹೆ ಕೊಡಬೇಕು ಎಂದ ಶಾಸಕ ಕೋನರೆಡ್ಡಿ, ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮಹದಾಯಿ ಯೋಜನೆ ಜಾರಿಮಾಡಲು ಒಂದು ತಿಂಗಳು ಸಾಕಾಗುತ್ತದೆ. ಈ ಮುಂದಿನ ಒಂದು ವರ್ಷದಲ್ಲಿ ಮಹದಾಯಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X