ಧಾರವಾಡ | ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸವಾಗಲಿ: ಪಿಎಸ್ಐ ಶಿವಾನಂದ ಅಂಬಿಗೇರ

Date:

Advertisements

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ  ತಿಳಿಸಿದರು

ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಮತ್ತೊಬ್ಬರ ಸಂತಸಕ್ಕೆ ನೋವುಂಟು ಮಾಡುವ ಮತ್ತು ಇನ್ನೊಬ್ಬರ ಆಚರಣೆಗೆ ದಕ್ಕೆ ತರುವ ಕೆಲಸಕ್ಕೆ ಮುಂದಾಗಬಾರದು. ಹಬ್ಬಗಳು ಎಲ್ಲರನ್ನೂ ಒಂದುಗೂಡಿಸುವುದಕ್ಕೆ ದಾರಿಯಾಗಬೇಕು.

  ಸಾಮಾಜಿಕ ಜಾಲತಾಣದಲ್ಲಿ ಬರುವ  ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ವಹಿಸಿ. ಅನುಮಾನವಿದ್ದರೆ ಪೊಲೀಸರ ಗಮನಕ್ಕೆ ತನ್ನಿ.  ಸುಳ್ಳು ಸುದ್ದಿಗಳಿಂದ ಸಮಾಜದಲ್ಲಿ ಶಾಂತಿ ಕದಡುತ್ತದೆ ಹಾಗಾಗಿ ಸುಳ್ಳು ಸುದ್ದಿಗಳ ಹರಡುವಿಕೆಯನ್ನು ಬುಡಮಟ್ಟ ಕಿತ್ತಾಕಬೇಕು.

Advertisements
1001520721

ಇನ್ನು ಯಾವುದೇ ಆಚರಣೆಗಳು ಮತ್ತು ಮಹಾತ್ಮರು ಒಂದೇ ಜಾತಿ ಸಮುದಾಯಕ್ಕೆ ಸಿಮೀತವಾಗಬಾರದು. ಅನಾಥ, ತುಳಿತಕ್ಕೊಳಗಾದವರಿಗೆ, ಬಿದ್ದವರಿಗೆ ಮೇಲೆತ್ತುವ ಕಾರ್ಯವು ಶ್ರೇಷ್ಠವಾದ ದಾನವಾಗಿದೆ.  ಹಿಂದೂ, ಮುಸ್ಲಿಂ ಹಬ್ಬಗಳನ್ನು ಬಂದುತ್ವದಿಂದ  ಆಚರಣೆ ಮಾಡಿ ಎಂದರು.

 ಬಕ್ರೀದ್ ಸಾಂತಿ ಸೌಹಾರ್ದತೆಯ ಹಬ್ಬವಾಗಿದ್ದು, ಶಾಂತಿಯುತವಾಗಿ ಆಚರಿಸೋಣ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಜಾಗೃತವಹಿಸೋಣ. ಕುಂದಗೋಳದಲ್ಲಿ ಯಾವುದೇ ಹಿಂದೂ‌-ಮುಸ್ಲಿಂ ಘರ್ಷಣೆ ನಡೆದಿಲ್ಲ. ಬಕ್ರಿದ್ ಮೊಹರಂಗೆ ಹಿಂದೂಗಳು ಸಹಕರಿಸುತ್ತೇವೆ. ಮುಸ್ಲಿಂ ಬಾಂಧವರೂ ಹಿಂದೂಗಳ ಹಬ್ಬಗಳಲ್ಲಿ ಸಹಕರಿಸುತ್ತಾರೆ ಎಂದು ಸಭೆಯಲ್ಲಿದ್ದ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ಬಕ್ರೀದ್ ಹಬ್ಬ ಎಲ್ಲರ ಹಬ್ಬವಾಗಿದೆ. ಅನ್ಯ ಕೋಮಿನವರೂ ಸಹಕರಿಸೋಣ ಎನ್ನುತ್ತಾ, ಪಟ್ಟಣದಲ್ಲಿ ಅನಧಿಕೃತ ಬಾವಚಿತ್ರ, ಧ್ವಜಗಳನ್ನು, ಬ್ಯಾನರ್‌ಗಳನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು. ಭೂದಾನ ಮಾಡಿದ ಅಣ್ಣಾಸಾಹೇಬ ನಾಡಗೇರಿ ಅವರ ಪುತ್ಥಳಿ ಮಾಡಲು ಪೊಲೀಸ್ ಇಲಾಖೆ ಸಹಕರಿಸಬೇಕು ಮತ್ತು ಎಲ್ಲ ಸಮಾಜದವರ ಸಹಕಾರವಿರಲಿ ಎಂದು ವಿನಂತಿಸಿದರು.

ಕುಂದಗೋಳ, ಸಂಶಿ ಹಾಗೂ ವಿವಿಧ ಸಮುದಾಯಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X