ಧಾರವಾಡ | ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ: ಗೌತಮ್ ರೆಡ್ಡಿ

Date:

Advertisements

“ಜೀವನದಲ್ಲಿ ಗುರಿ ಅತ್ಯಂತ ಅವಶ್ಯಕ. ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ. ಅದಕ್ಕಾಗಿ ಯುವಜನರು ಮೊದಲು ತಮ್ಮ ಜೀವನದ ಗುರಿಯನ್ನು ಹೊಂದಿರುವುದು ಮುಖ್ಯ” ಎಂದು ಅತಿಥಿ ಗೌತಮ್ ರೆಡ್ಡಿ ತಿಳಿಸಿದರು.

ಧಾರವಾಡದ ಅಂಜುಮನ್ ಕಲಾವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಐಕ್ಯೂಎಸ್‌ಎ ಅಡಿಯಲ್ಲಿ ವಾಣಿಜ್ಯ ವಿಭಾಗ ಮತ್ತು ಸಮಾಜಶಾಸ್ತ್ರ ಹಾಗೂ ದಿನಾಚರಣೆ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಯುವಕರ ದಿನ” ಕಾರ್ಯಕ್ರಮದಲ್ಲಿ ಮಾತನಾಡಿದರು.

ತಮ್ಮ ನುಡಿಗಳಲ್ಲಿ ನೆಹರು ಯುವ ಕೇಂದ್ರದಿಂದ ಯುವಕರಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ವಿವರಿಸಿದರು. ಯುವಕರು ಅವುಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

Advertisements

ಕಾರ್ಯಕ್ರಮದ ಅಧ್ಯಕ್ಷ, ಪ್ರಾಚಾರ್ಯ ಡಾ. ಎನ್ ಎಂ ಮಕಾನದಾರ ಮಾತನಾಡಿ, “ಯುವಶಕ್ತಿ ದೇಶದ ಬೆನ್ನೆಲುಬು. ಸದೃಢ ಯುವಕರಿಂದ ಸದೃಢ ದೇಶವಾಗಲು ಸಾಧ್ಯ. ನಿಮ್ಮಲ್ಲಿರುವ ಅಸಾಧಾರಣ ಸಾಮರ್ಥ್ಯವನ್ನು ನೀವು ಅರಿತುಕೊಳ್ಳಿ ಅಂದಾಗ ದೇಶದ ಪ್ರಗತಿ ಸಾಧ್ಯ” ಎಂಬ ಮಾತನ್ನು ಯುವಕರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಂಶುಪಾಲ, ವಾರ್ಡನ್ ಅಮಾನತು

ಕಾರ್ಯಕ್ರಮದಲ್ಲಿ ಐಕ್ಯೂಎಸ್‌ಸಿ ಸಂಯೋಜಕ ಡಾ.ಏನ್.ಬಿ.ನಲತವಾಡ ಇದ್ದರು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರೊ.ಉಲ್ಲಾಸ್ ದೊಡ್ಡಮನಿ ನೆರವೇರಿಸಿದರು. ಕು.ಉಸ್ಮಾನ್ ಅತ್ತಾರ್ ಕುರಾನ್ ಪಟ್ಟಣದ ಮೂಲಕ ಕಾರ್ಯಕ್ರಮ ಪ್ರಾರಂಭಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X