ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

Date:

ಲಿಂಗಾಯತ ಧರ್ಮವನ್ನಾಗಿ ಮಾಡಲು ನಾವು ಸರ್ಕಾರಗಳಿಗೆ ಯಾವುದೇ ಗಡುವು ನೀಡುವುದಿಲ್ಲ. ಬದಲಾಗಿ ಹೋರಾಟ ಮಾಡುತ್ತೇವೆ. ಇಂದು ಸಿಖ್ ಮತ್ತು ಜೈನ ಧರ್ಮಗಳು ಸ್ವತಂತ್ರ ಧರ್ಮಾಗಿರುವುದಕ್ಕೆ ಹೋರಾಟವೇ ಕಾರಣ ಎಂದು ಗದುಗಿನ ತೋಂಟದಾರ್ಯ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು.

- Advertisement -

ಧಾರವಾಡ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸತ್ಯಕ್ಕೆ ನ್ಯಾಯ ಸಿಗುವ ಭರವಸೆ ನಮಗಿದೆ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಲಿಂಗಾಯತ ಮಠಾಧಿಪತಿ ಒಕ್ಕೂಟದಿಂದ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸರ್ಕಾರದ ಎಲ್ಲ ದಾಖಲೆಗಳಲ್ಲಿ ಲಿಂಗಾಯತ ಎಂಬ ಶಬ್ದ ಮಾತ್ರ ಬಳಕೆಯಲ್ಲಿದೆ. ಎಲ್ಲಿಯೂ ವೀರಶೈವ ಲಿಂಗಾಯತ ಎಂಬ ಪದವಿಲ್ಲ. ವೀರಶೈವವೂ ಕೂಡ ಲಿಂಗಾಯತ ಧರ್ಮದ ಒಂದು ಒಳಪಂಗಡ. ಕೆಲವರು ವೀರಶೈವ ಲಿಂಗಾಯತ ಶಬ್ದ ಬಳಸಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವನ್ನಾಗಿ ಘೋಷಿಸಬೇಕು. ಈ ಕುರಿತಂತೆ ಶಾಸಕರು, ಸಚಿವರು ಹಾಗೂ ರಾಜ್ಯ ಲೋಕಸಭಾ ಸದಸ್ಯರಿಗೆ ಮನವಿ ಮೂಲಕ ಆಗ್ರಹಿಸಲಾಗುವುದು” ಎಂದರು.

“2008ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಿಂಗಾಯತ ಹೋರಾಟಕ್ಕೆ ಮಣಿದು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ ನೇತೃತ್ವದ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿಯು ಸಮಗ್ರ ಅಧ್ಯಯನ ನಡೆಸಿ ವಿಸ್ತೃತವಾದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಭಿಪ್ರಾಯ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು” ಎಂದು ತಿಳಿಸಿದರು.

“ಕೇಂದ್ರ ಸರ್ಕಾರ ಆ ಕುರಿತು ಯಾವುದೇ ಸಮಾಲೋಚನೆ ಮಾಡದೇ ಸಂಬಂಧಿಸಿದ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸದೆ ಪ್ರಸ್ತಾವನೆಯನ್ನು ವಾಪಸ್ ಕಳಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಸಭೆ ಸೇರಿದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಮಹಾಸ್ವಾಮಿಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಿದ್ಧಪಡಿಸಿದ ಪ್ರಸ್ತಾವನೆಯನ್ನು ಸೂಕ್ತ ಆಧಾರಗಳು ಹಾಗೂ ತಿದ್ದುಪಡಿಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಈ ಚಿಂತನ ಮಂಥನ ಸಭೆಯ ಮೂಲಕ ಆಗ್ರಹಿಸುತ್ತೇವೆ” ಎಂದು ತಿಳಿಸಿದರು.

ಕಾನೂನು ಹೋರಾಟಕ್ಕೆ ಚಿಂತನೆ

ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ರಾಜ್ಯದ ಸಂಸದರನ್ನು ಸಂಪರ್ಕಿಸುತ್ತೇವೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳನ್ನು ಹೆದರಿಸುವುದಕ್ಕಾಗಿ ಈ ರೀತಿ ಮಾಡುತ್ತಿಲ್ಲ. ನ್ಯಾಯೋಚಿತವಾದ ಬೇಡಿಕೆಯನ್ನು ಈಡೇರಿಸುವಂತೆ ಹೋರಾಡುತ್ತಿದ್ದೇವೆ. ಈ ಬಗ್ಗೆ ಕಾನೂನು ಹೋರಾಟ ನಡೆಸಲು ಈಗಾಗಲೇ ಚಿಂತನೆಯೂ ಸಾಗಿದೆ” ಎಂದರು.

ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು

ಬಾಲ್ಕಿ ಮಠದ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೂರಕ್ಕೂ ಅಧಿಕ ಸ್ವಾಮೀಜಿಗಳ ನೇತೃತ್ವದಲ್ಲಿ ರವಿವಾರ ಧಾರವಾಡದಲ್ಲಿ ಸಭೆ ಕೈಗೊಂಡು, ಚಿಂತನ-ಮಂಥನದ ಬಳಿಕ ಒಮ್ಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ನಿರಂತರವಾಗಿ ಮುಂದುವರೆಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಇರುವ ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರವು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಇದರ ಜತೆಗೆ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

ಈ ಸಂದರ್ಭದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಭಾಲ್ಕಿ ಮಠದ ಬಸವಲಿಂಗ ಪಟ್ಟದದೇವರು, ಕೂಡಲಸಂಗಮ ಧರ್ಮ ಪೀಠದ ಡಾ. ಗಂಗಾಮಾತಾಜಿ, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜ ಯೋಗೇಂದ್ರ ಸ್ವಾಮೀಜಿ, ಇಳಕಲ್ಲಿನ ಗುರುಮಹಾಂತ ಸ್ವಾಮೀಜಿ, ಮೈಸೂರಿನ ಚಿದಾನಂದ ಸ್ವಾಮೀಜಿ, ಅಥಣಿ ಪ್ರಭು ಚನ್ನಬಸವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...