ಧಾರವಾಡ | ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ: ಬಸವರಾಜ ಸಾದರ

Date:

ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿಯನ್ನು ಸಾಹಿತ್ಯ ಹೊಂದಿದ್ದು, ಜನಸಾಮಾನ್ಯರೂ ತಮ್ಮ ಇಷ್ಟದ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಹೇಳಿದರು.

- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಪ್ರಾದೇಶಿಕ ಕಚೇರಿ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಲ್ಲಂಬಿಯಲ್ಲಿ ಬೇಗೂರು ಗ್ರಾಮ ಪಂಚಾಯಿತಿ, ಕೃಷಿ ಜ್ಯೋತಿ ರೈತ ಉತ್ಪಾದಕ ಕಂಪನಿ, ಗ್ರಾಮದ ಹಲವು ಯುವಕ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಮ್ಮ ಪರಂಪರೆಯಲ್ಲಿನ ಶರಣರು, ಸಂತರು, ದಾಸರು, ಸಮಾಜ ಸುಧಾರಕರೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಾಹಿತ್ಯವನ್ನು ಆಶ್ರಯಿಸಿ ಮನುಕುಲದ ಕಲ್ಯಾಣಕ್ಕೆ ದುಡಿದಿದ್ದಾರೆ. ತಮ್ಮ ಸಾಹಿತ್ಯದಲ್ಲಿ ಹುಟ್ಟೂರು ಮತ್ತು ಬಾಲ್ಯದ ಸಂಗತಿಗಳೇ ತುಂಬಿದ್ದು, ಬರೆದರೂ ತೀರದಷ್ಟು ಸಾಮಗ್ರಿಯನ್ನು ಒದಗಿಸುತ್ತಿದೆ. ಊರಿನ ಋಣವನ್ನು ತೀರಿಸಲು ಸಾಧ್ಯವಿಲ್ಲದಿದ್ದರೂ ಅದರ ಬಗೆಗಿನ ಕೃತಜ್ಞತಾ ಭಾವವು ನಮ್ಮಲ್ಲಿ ಮಾನವೀಯ ಸೆಲೆಯನ್ನು ಹುಟ್ಟುಹಾಕುತ್ತದೆ” ಎಂದರು.

ತಮ್ಮ ತಂದೆ ತಾಯಿಯವರ ಹೆಸರಿನಲ್ಲಿ ಹುಲ್ಲಂಬಿ ಸರ್ಕಾರಿ ಶಾಲೆಯ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಇಬ್ಬರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ₹25,000 ಶಾಶ್ವತ ಠೇವಣಿಯನ್ನು ಮುಖ್ಯೋಪಾದ್ಯಾಯ‌ ದ್ಯಾವಪ್ಪವನವರ ಅವರಿಗೆ ಹಸ್ತಾಂತರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಶಿವಪ್ಪ ಕುಡಬಾಯಿ, ಶಂಕ್ರಪ್ಪ ಸಾದರ, ಗುರುನಾಥ ಹರಿಜನ, ಶಿವಪ್ಪ ನೀರಲಕಟ್ಟಿ, ರಾಚಪ್ಪ ಬಿಸರಳ್ಳಿ, ಸ್ಕೋಪ್ ಸಂಸ್ಥೆಯ ಬಂಡೇರಾವ ಪಟವಾರಿ, ನಿಡಗುಂದಿ, ಬಸಪ್ಪ ಶೀಗಿಗಟ್ಟಿ, ಸಾವಕ್ಕ ಮನಗುಂಡಿ, ನಾಗಲಿಂಗ ಸಾದರ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು, ಯುವಜನರು, ಮಕ್ಕಳು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...