ಧಾರವಾಡ | ವಚನಗಳು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ.

Date:

Advertisements

12 ನೇ ಶತಮಾನದಲ್ಲಿ ಶರಣ ಕ್ರಾಂತಿಯ ಪ್ರಮುಖರಾಗಿ ಗುರುತಿಸಿಕೊಂಡಿರುವ ಮಡಿವಾಳ ಮಾಚಿದೇವರು ಬಸವನಿಷ್ಠರು ಮತ್ತು ಅವರ ಭಕ್ತಿ, ಪರಾಕ್ರಮಗಳು ಇತರರಿಗೆ ಮಾದರಿಯಾಗಿದ್ದವು. ಜೀವನ ಮಾರ್ಗ ತೊರಿಸುವ ವಚನಗಳು ಮುಂದಿನ ಪೀಳಿಗೆಯವರಿಗೆ ಹಸ್ತಾಂತರವಾಗಬೇಕು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಅವರು ಫೆ.1ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶರಣ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

12 ನೇ ಶತಮಾನದ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರು. ಮಡಿವಾಳ ಮಾಚಿದೇವರು ಹಿಮಾಲಯದಷ್ಟು ಅಚಲ‌ಹಾಗೂ ದೃಢ ನಿರ್ಧಾರ ಹೊಂದಿದವರು ಎಂದರು. ಕನ್ನಡನಾಡಿಗೆ ಹೊಸ ಭರವಸೆ, ಸಾಮಾಜಿಕ ಬದಲಾವಣೆಗಳನ್ನು ಮೂಡಿಸಿದ್ದ ಶರಣರ ವಚನಗಳನ್ನು ಮಕ್ಕಳು ಪಠಣೆ ಮಾಡಿ, ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾತ್ಮಕವಾದ ಕಾರ್ಯಗಳು ಆಗಬೇಕು ಎಂದು ಹೇಳಿದರು.

Advertisements

ಜನರಲ್ಲಿ ನಮ್ಮ ರಾಜ್ಯದ ಮತ್ತು ರಾಷ್ಟ್ರದ ಸಾಮಾಜಿಕ, ಧಾರ್ಮಿಕ ವೈವಿಧ್ಯತೆಗಳನ್ನು, ಭಾವೈಕ್ಯತೆಯನ್ನು ಮತ್ತು ಸಹಿಷ್ಣುತೆಯನ್ನು ಮೂಡಿಸುವದಕ್ಕಾಗಿ ಅನೇಕ ಮಹಾತ್ಮರ, ಶರಣರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಶರಣರ ಸಂದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕೆಂದು ಹೇಳಿದರು.

ಬೆಳಗಾವಿ ನಗರದ ಎಂ.ಎಚ್.ಪಿ.ಎಸ್ ನಂ-12 ರ ಸಂಪನ್ಮೂಲ ವ್ಯಕ್ತಿ ಹಾಗೂ ಸಂಶೋಧಕ ಡಾ. ಬಾಳಪ್ಪ ಈರಪ್ಪ ಚಿನಗುಡಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಅನಿತಾ ಸಂತೋಷ ಚಳಗೇರಿ, ಧಾರವಾಡ ಜಿಲ್ಲಾ ಮಡಿವಾಳರ ಸಂಘ ಗೌರವಾಧ್ಯಕ್ಷ ವಾಯ್. ಡಿ. ನವಲಗುಂದ, ಅಧ್ಯಕ್ಷ ಮಡಿವಾಳಪ್ಪ ಎಫ್. ಮಡಿವಾಳರ, ಉಪಾಧ್ಯಕ್ಷ ಯಲ್ಲಪ್ಪ ಬ. ಬೆಂಡಿಗೇರಿ ಸೇರಿದಂತೆ ಜಿಲ್ಲಾ ಸಂಘದ ವಿವಿಧ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವರಸಿ ಓದಿದ್ದೀರಾ? ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X