ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

Date:

Advertisements

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ ಸೇತುವೆ ಕೊಚ್ಚಿ ಹೋದದ್ದನ್ನು ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೂಡಲೇ ವಿಶೇಷ ತಜ್ಞರ ಜೊತೆ ಚರ್ಚಿಸಿ ಸ್ಟೀಲ್ ಬ್ರಿಡ್ಜ್ ಅಥವಾ ನೂತನ ಸೇತುವೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

“ಈಗಾಗಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಜೊತೆ ಚರ್ಚಿಸಿದ್ದು, ತಕ್ಷಣ ವರದಿ ನೀಡಿ ಸರ್ಕಾರದಿಂದ ಮಂಜೂರಾತಿ ಪಡೆಯಬೇಕು” ಎಂದು ಹೇಳಿದ ಅವರು, “ತಜ್ಞರ ಅಭಿಪ್ರಾಯದ ನಂತರ ಸೇತುವೆ ದುರಸ್ಥಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು” ಸೂಚಿಸಿದರು.

ನವಲಗುಂದ ನಗರದ ಹುಗ್ಗಿ ಓಣಿಯ ಮನೆ ಬಿದ್ದ ತರುವಾಯ ದ್ಯಾಮವ್ವ ಬನ್ನೆಣ್ಣವರ ಹಾಗೂ ಕಳ್ಳಿಮಠ ಮೆಹಬೂಬ ನಗರದ ಮೋದಿನಸಾಬ ಶಿರಕೋಳ ಅವರುಗಳಿಗೆ ತಲಾ 25 ಸಾವಿರ ವೈಯಕ್ತಿಕ ಪರಿಹಾರ ಹಾಗೂ ಸರ್ಕಾರದಿಂದ 1 ಲಕ್ಷ 20 ಸಾವಿರ ಪರಿಹಾರ ನೀಡಲು ತಿಳಿಸಿದರು.

Advertisements
IMG 20250823 WA0082

ಇದನ್ನೂ ಓದಿ: ಧಾರವಾಡ | ಭಾರಿ ಮಳೆಗೆ ಪ್ರವಾಹ ಸೃಷ್ಟಿ; ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ರಕ್ಷಣೆ

ಶಲವಡಿ ನಾಯಕನೂರ ಗ್ರಾಮದ ನಡುವೆ ಜಮೀನಿನಲ್ಲಿ ಹೆಸರು ಹಾಗೂ ಈರುಳ್ಳಿ ಬೆಳೆ ಹಾನಿಯಾಗಿದ್ದನ್ನು ವೀಕ್ಷಿಸಿದರು . ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನೆ ಕುಸಿದು ಹಾನಿಯಾದ ಮನೆಗೆ ಭೇಟಿ ನೀಡಿ 25 ಸಾವಿರ ವೈಯಕ್ತಿಕ ಪರಿಹಾರ ಹಾಗೂ ಸರ್ಕಾರದಿಂದ 1 ಲಕ್ಷ 20 ಸಾವಿರ ಪರಿಹಾರ ನೀಡಲು ಕಂದಾಯ ಅಧಿಕಾರಿಗಳಿಗೆ ಹೇಳಿದರು. ಈಗಾಗಲೇ ಮನೆ ಕುಸಿತದಲ್ಲಿ ಸಿಲುಕಿದ 4 ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ತಿಳಿಸಿದರು.ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಹತ್ತಿರ ಶಿರಗುಪ್ಪಿ ಗ್ರಾಮದ ನಿಂಗವ್ವ ತೊಗರಿಮನಿ ಅವರ ಹೊಲದಲ್ಲಿ ಹೆಸರು ಬೆಳೆ ಹಾನಿಯಾಗಿದ್ದನ್ನು ವೀಕ್ಷಣೆ ಮಾಡಿ ಸರ್ಕಾರಕ್ಕೆ ತಕ್ಷಣ ವರದಿ ಮಾಡಿ ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X