ಧಾರವಾಡ | ಆಧುನಿಕ ಜೀವನ ಶೈಲಿಯೇ ಕ್ಯಾನ್ಸರ್ ಖಾಯಿಲೆಗೆ ಕಾರಣ: ಡಾ. ಸಂಗಪ್ಪಾ ಗಾಬಿ

Date:

ಕ್ಯಾನ್ಸರ್ ಖಾಯಿಲೆಯಿಂದ ಮುಕ್ತವಾಗಲು ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ತಂಬಾಕು ಉತ್ಪನ್ನ, ಮಧ್ಯಪಾನ ಮತ್ತು ಧೂಮ್ರಪಾನಗಳಿಂದ ದೂರವಿರಬೇಕು. ಕ್ಯಾನ್ಸರ್ ಖಾಯಿಲೆಗೆ ಆಧುನಿಕ ಜೀವನ ಶೈಲಿ ಕಾರಣ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ ತಿಳಿಸಿದರು.

- Advertisement -

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ, ಜಿಲ್ಲಾ ಎನ್.ಸಿ.ಡಿ ಕ್ಲಿನಿಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಂಬಾಕು ವ್ಯಸನಮುಕ್ತ ಕೇಂದ್ರ, ಧಾರವಾಡ ಜಿಲ್ಲಾ ಆಸ್ಪತ್ರೆಯಿಂದ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ (ಎನ್‍ಪಿ-ಎನ್‍ಸಿಡಿ) ದ ಅಡಿಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಫೆ. 04ರಂದು ಮಧುಮೇಹ, ರಕ್ತದೊತ್ತಡ ಹಾಗೂ ಸಾಮಾನ್ಯ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಧಾರವಾಡ ಜಿಲ್ಲೆಯಲ್ಲಿ ಕಳೆದ ಎಪ್ರಿಲ್ 2024 ರಿಂದ ಜನವರಿ 2025 ವರೆಗೆ ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ಕ್ಲಿನಿಕ್‍ದಲ್ಲಿ ವಿವಿಧ ರೀತಿಯ ಸುಮಾರು 57 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ. ಜನರ ಜೀವನ ಶೈಲಿಯಿಂದ ಇಂದು ಕ್ಯಾನ್ಸರ್ ರೋಗವು ಸಾಮಾನ್ಯವಾಗಿ ಕಾಣುತ್ತಿದೆ. ಜಿಲ್ಲೆಯಲ್ಲಿ ನಾಲಿಗೆ ಕ್ಯಾನ್ಸರ್, ಬಾಯಿ ಹುಣ್ಣಿನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಧ್ವನಿಪೆಟ್ಟಿಗೆಯ ಕ್ಯಾನ್ಸರ್ ಕಂಡುಬರುತ್ತಿವೆ. ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕ್ಯಾನ್ಸರ್ ತಪಾಸಣೆ ಮಾಡಲಾಗುತ್ತದೆ. ಕ್ಯಾನ್ಸರ್ ರೋಗ ದೃಢವಾದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್, ನವನಗರ ಕ್ಯಾನ್ಸರ್ ಆಸ್ಪತ್ರೆ ಹಾಗೂ ಇತರ ಖಾಸಗಿ ಕ್ಯಾನ್ಸರ್ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಲಾಗುತ್ತದೆ. ರೋಗದ ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪರಶುರಾಮ ಎಫ್. ಕೆ. ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ವಿವಿಧ ಎನ್.ಸಿ.ಡಿ ಕ್ಲಿನಿಕ್‍ಗಳಲ್ಲಿ 154 ಪುರಷ ಹಾಗೂ 225 ಮಹಿಳೆಯರು ಸೇರಿ ಒಟ್ಟು 379 ಜನರಲ್ಲಿ ಕ್ಯಾನ್ಸರ್ ತಪಸಣೆ ಮಾಡಲಾಗಿದೆ ಎಂದರು.

ಎನ್.ಪಿ.ಪಿ.ಸಿ ವಿಭಾಗದ ಜನರಲ್ ಫಿಜಿಸಿಯನ್ ಡಾ. ವಿವೇಕಾನಂದ ಕಾಮತ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಕ್ಯಾನ್ಸರ್ ದಿನಾಚರಣೆಯ ಘೋಷವಾಕ್ಯ–ವಿಶಿಷ್ಟತೆಯಿಂದ ಏಕತೆ ಕುರಿತು ಹಾಗೂ ಬಾಯಿ, ಸ್ತನ್ ಹಾಗೂ ಗರ್ಭಕೊರಳು ಮುಂತಾದ ಸಾಮಾನ್ಯ ಕ್ಯಾನ್ಸರ್‍ಗಳ ಲಕ್ಷಣಗಳು ಹಾಗೂ ತಡೆಗಟ್ಟುವಿಕೆಯ ಕುರಿತು ತಿಳಿಸಿದರು.

ಈ ವರದಿ ಓದಿದ್ದೀರಾ? ಧಾರವಾಡ | ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ವಾಸ್ತವ: ಎಸ್ ಆರ್ ಗುಂಜಾಳ

ನೇತ್ರಾವತಿ ಆಸಂಗಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಮುಖ್ಯ ಚಿಕಿತ್ಸಕ ಡಾ. ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್‍ನ ಜನರಲ್ ಫಿಜಿಸಿಯನ್ ಡಾ. ವಾಸಂತಿ ಜೀರಗಳ, ಎನ್.ಪಿ.ಎಚ್.ಸಿ.ಇ ಜನರಲ್ ಫಿಜಿಸಿಯನ್ ಡಾ. ನಿವೇದಿತಾ ಪಾಟೀಲ, ಡಾ. ಹೀನಾ ಮತ್ತು ಎನ್.ಪಿ.ಪಿ.ಸಿ ವೈದ್ಯಾಧಿಕಾರಿ ರಿಂದವ್ವ ನಾವಳ್ಳಿ, ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಜಿಲ್ಲಾ ಎನ.ಸಿ.ಡಿ ಕ್ಲಿನಿಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಂಬಾಕು ವ್ಯಸನಮುಕ್ತ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಯ ಎಲ್ಲ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...