ಧಾರವಾಡ | ಉಣಕಲ್ ಕೆರೆಗೆ ʼಚನ್ನಬಸವ ಸಾಗರʼ ಹೆಸರಿಡಲು ಆಕ್ಷೇಪಗಳಿಲ್ಲ: ಪೊಲೀಸ್‌ ಇಲಾಖೆ

Date:

Advertisements

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ನಮ್ಮಿಂದ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಿಗೆ ವಿದ್ಯಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಭಿಪ್ರಾಯ ತಿಳಿಸಿದ್ದಾರೆ.

ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ಸೂಕ್ತ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರು ವಿದ್ಯಾನಗರ ಠಾಣೆಗೆ ಕಾರ್ಯಾಲಯದಿಂದ ಪತ್ರ ಬರೆದಿದ್ದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಈ ಸಂಬಂಧ ಹುಬ್ಬಳ್ಳಿ-ಧಾರಾವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ “ಚನ್ನಬಸವ ಸಾಗರ ಎಂದು ನಾಮಕರಣ ಮಾಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ.

“ಪಟ್ಟಣದ ವಿದ್ಯಾನಗರ ಠಾಣಾ ವ್ಯಾಪ್ತಿಯ ಉಣಕಲ್ ಕೆರೆಗೆ ಚನ್ನಬಸವ ಸಾಗರ ಎಂದು ನಾಮಕರಣ ಮಾಡುವ ಬಗ್ಗೆ ಉಣಕಲ್ ವಾರ್ಡ್‌ನ ಚುನಾಯಿತ ಪ್ರತಿನಿಧಿಗಳು, ಉಣಕಲ್, ಸಾಯಿನಗರ ಮತ್ತು ತಾಜನಗರದ ನಾಗರಿಕರನ್ನು ಸಂರ್ಪಕಿಸಿ ಉಣಕಲ್ ಕೆರೆಗೆ “ಚನ್ನಬಸವ ಸಾಗರʼʼ ಎಂದು ನಾಮಕರಣ ಮಾಡುವ ಬಗ್ಗೆ ವಿಚಾರಿಸಲಾಗಿತ್ತು. ನಮ್ಮದು ಯಾವುದೇ ಆಕ್ಷೇಪಣೆಗಳು ಇಲ್ಲ. ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ಠಾಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ದೂರು ಬಂದಿಲ್ಲ” ಎಂದು ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‌ಕೊಡಗು | ಅದಿವಾಸಿ – ಅಲೆಮಾರಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ‘ಕೆವಿಎಸ್‌’

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X