ಧಾರವಾಡ | ಉದ್ಯಾನವನ ಸ್ವಚ್ಛಗೊಳಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ NSS ಶಿಬಿರಾರ್ಥಿಗಳು

Date:

Advertisements

ಸಾಮಾನ್ಯವಾಗಿ ನಾವು ಕಾಣುವಂತೆ ಬಹುತೇಕರು ಕೇಕ್‌ ಕತ್ತರಿಸಿ ತಮ್ಮ‌ ಜನುಮ ದಿನ ಆಚರಿಸಿಕೊಳ್ಳುತ್ತಾರೆ.‌ ಆದರೆ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರಾರ್ಥಿಗಳು ಉದ್ಯಾನವನ ಸ್ವಚ್ಛಗೊಳಿ ಹಾಗೂ ಸಸಿ ನೆಡುವುದರ ಮೂಲಕ ತಮ್ಮ ಹುಟ್ಟ ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಧಾರವಾಡ ಜಿಲ್ಲಾ ನೂಡಲ್ ಅಧಿಕಾರಿ ಡಾ. ಬಸವರಾಜ ತಲ್ಲೂರ ಮಾರ್ಗದರ್ಶನದಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಗಳಾದ ಆಕಾಶ ಹಾಗೂ ಬೀರಪ್ಪ ತಮ್ಮ ಹುಟ್ಟು ಹಬ್ಬಕ್ಕೆ ಕೇಕ್ ಕತ್ತರಿಸಿಕೊಳ್ಳದೆ ಉದ್ಯಾನವನವನ್ನು ಸ್ವಚ್ಛಗೊಳಿಸುವ ಹಾಗೂ ಸಸಿ ನೆಡುವುದರ ಮೂಲಕ ಶ್ರಿನಗರವನ್ನು ಸ್ವಚ್ಛಗೊಳಿಸಿದರು. ಈ ರೀತಿಯ ವಿಶೇಷ ಆಚರಣೆ ಶಿಬಿರಾರ್ಥಿಗಳಲ್ಲಿ ಬಹಳ ಉತ್ಸಾಹ ತಂದಿತ್ತು.

IMG 20250506 135239

ಈ ಕುರಿತು ನೂಡಲ್ ಅಧಿಕಾರಿ ಡಾ. ಬಸವರಾಜ ತಲ್ಲೂರ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಈ ಬಗೆಯ ವಿಶಿಷ್ಠ ಹುಟ್ಟು ಹಬ್ಬದ ಆಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ನಮ್ಮ‌ ದಾರಿಯಲ್ಲಿ‌ ನಮ್ಮ‌ ವಿದ್ಯಾರ್ಥಿಗಳೂ ಸರಳವಾಗಿ ನಡೆಯುತ್ತಿರುವುದು ಸಂತಸ ತಂದಿದೆ. ಹೀಗೇ ಸಾಧ್ಯವಾದಷ್ಟು ಹುಟ್ಟು ಹಬ್ಬದ ಸಂದರ್ಭದಲ್ಲಿ ಸ್ವಚ್ಛತೆ ಇತ್ಯಾದಿ ಸಾಮಾಜಿಕ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದರು. ಡಾ. ವಿಳಾಸ ಕುಲಕರ್ಣಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು.

Advertisements

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಕಾರು ಲಾರಿ‌ ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು

ಈ ವೇಳೆ ಎನ್ಎಸ್ಎಸ್ ಸ್ವಯಂ ಸೇವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X