ರಾಜರು ತಮ್ಮ ಸೇನಾ ಬಲದಿಂದ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರಿ ಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ. ಒನಕೆ ಓಬವ್ವಳು, ಯಾವುದೇ ಒಂದು ಜಾತಿ ಸಮುದಾಯಕ್ಕೆ ಮಾತ್ರ ಸಿಮೀತವಲ್ಲ ಎಂದು ಧಾರವಾಡದ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ‘ವೀರವನಿತೆ ಒನಕೆ ಓಬವ್ವ’ ಜಯಂತಿ ಅಂಗವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಮಕ್ಕಳಿಗೆ ವೀರವನಿತೆ ಓಬವ್ವಳ ಬಗ್ಗೆ ತಿಳಿಸಬೇಕು. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ನಾಮಕರಣ ಮಾಡಿ, ಗೌರವಿಸಲಾಗಿದೆ. ಓಬವ್ವ ಒಬ್ಬ ಕೋಟೆ ಕಾವಲುಗಾರನ ಹೆಂಡತಿಯಾಗಿ, ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಹೋರಾಡಿ, ಮಹಿಳೆಯರ ಸಾಧನೆಗೆ ಪ್ರೇರಕಳಾಗಿದ್ದಾಳೆ. ಅವಳ ಗುಣ, ಸಾಹಸಗಳು ನಮಗೆಲ್ಲ ಮಾದರಿ ಎಂದರು.
ಕವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಸ್.ಜಿ. ಛಲವಾದಿ ಒನಕೆ ಓಬವ್ವನ ಜೀವನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅಥಿತಿಗಳ ಪರಿಚಯ ಮಾಡಿದರು. ರವಿ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ವರದಿ ಓದಿದ್ದೀರಾ? ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಯಲ್ಲಪ್ಪ ಮಂಟೂರು, ದೇವಾನಂದ ರತ್ನಾಕರ, ರವಿ ಸಾಂಬ್ರಾಣಿ ಹಾಗೂ ಇಂದುಮತಿ ಶಿರಗಾಂವಿ, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.