ಧಾರವಾಡ | ಅಡೆತಡೆಗಳನ್ನು ಎದುರಿಸಿದಾಗಲೇ ಜಯಶಾಲಿ ಆಗಲು ಸಾಧ್ಯ: ಎನ್.ಶಶಿಕುಮಾರ್

Date:

Advertisements

ಪರಿಶ್ರಮವಿಲ್ಲದೇ ಸಾಧನೆ ಮಾಡಲು ಸಾಧ್ಯವಿಲ್ಲ. ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಜೀವನದಲ್ಲಿ ಅಡೆತಡೆಗಳನ್ನು ಎದುರಿಸಿದಾಗ ಮಾತ್ರ ಜಯಶಾಲಿ ಆಗುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನಗರದ ಅಂಜುಮನ ಪದವಿ ಮಹಾವಿದ್ಯಾಲಯದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದರು.

ತಂದೆ-ತಾಯಿ, ಸಂಸ್ಥೆಗೆ ಮತ್ತು ಸಮಾಜಕ್ಕೆ ನಾವು ಋಣಿಯಾಗಿರಬೇಕು ಎಂದು ಹೇಳುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಕೆ ಹಾಗೂ ಅವರ ವಿದ್ಯಾಭ್ಯಾಸದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಭೂಮಿಯ ಮೇಲೆ ಎಲ್ಲರೂ ಸಮಾನರು. ಅಧ್ಯಯನಕ್ಕೆ ಯಾವ ಕುಂಟುನೆಪ ಹೇಳಬೇಡಿ. ನಿಮ್ಮ ಹಿಂದೆ ಅಂಜುಮನ್ ಇಸ್ಲಾಂ ಸಂಸ್ಥೆ ಇದೆ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಸಂಸ್ಥೆಗೆ ಮತ್ತು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹೇಳಿದರು.

Advertisements

ಕು. ನಾಜನಿನ ತಮಟಗಾರ ಸಾಧನೆ ಗುರಿತಿಸಿ, ಮಹಾವಿದ್ಯಾಲಯದಿಂದ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಎನ್. ಎಮ್. ಮಕಾನದಾರ ಸ್ವಾಗತಿಸಿದರು. ಡಾ. ರುದ್ರೇಶ ಮೇಟಿ ವಂದನಾರ್ಪಣೆ ಮಾಡಿದರು. ಪ್ರೋ.ಆಸ್ಕಾ ನದಾಫ ಮತ್ತು ಡಾ. ಸೈಯದ ತಾಜುನಿಸ್ಸಾ ನಿರೂಪಿಸಿದರು.

ಈ ವರದಿ ಓದಿದ್ದೀರಾ? ವಿಜಯಪುರ | ವಿಶೇಷಚೇತನರು ಕೀಳರಿಮೆ ತೊರೆದು ಮುಖ್ಯವಾಹಿನಿಗೆ ಬರಬೇಕು: ನ್ಯಾ. ಹರೀಶ್ ಜಾಧವ್

ಕಾರ್ಯಕ್ರಮದಲ್ಲಿ ಅಂಜುಮನ ಇಸ್ಲಾಂ ಸಂಸ್ಥೆ ಪಧಾದಿಕಾರಿಗಳಾದ ಬಶೀರ ಆಹ್ವದ ಜಾಗೀರದಾರ, ಡಾ. ಸರಗಿರೊ, ಮಹಮ್ಮದ ರಫೀಕ ಶಿರಹಟ್ಟಿ, ಕಲೀಲ್ ಅಹ್ಮದ ದಾಸನಕೊಪ್ಪ, ಕೈರುದ್ದಿನ ಶೇಖ, ರಿಯಾಜಅಹ್ಮದ ನನ್ನೆಸಾಬನವರ, ಡಾ.ಎನ್. ಬಿ.ನಾಲತವಾಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X