ಧಾರವಾಡ | ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ: ಡಾ. ಶಶಿ ಪಾಟೀಲ

Date:

Advertisements

ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.

ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಲಕಲ್ಲ ಡಾ‌. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕ ದ್ರವ್ಯ, ತಂಬಾಕುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರು ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ, ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷವೂ ಆಗಸ್ಟ್ 1ರಂದು ಲಿಂಗೈಕ್ಯ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕರ್ನಾಟಕ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಗಾಂಜಾ ಮತ್ತಿನಲ್ಲಿ ಯುವಜನರ ಅಸಭ್ಯ ವರ್ತನೆ; ಎಸ್‌ಪಿ, ಅರಣ್ಯ ಇಲಾಖೆ ಅಲರ್ಟ್‌

ಕರ್ನಾಟಕ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಡಿ ಬಿ ಕರಡೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆಯ ಮನೋವೈದ್ಯೆ ಡಾ ವೈಶಾಲಿ ಎನ್ ಹೆಗಡೆ, ಕವಿವಿ ಎನ್‌ಎಸ್‌ಎಸ್‌ ಕೋಶದ ಸಂಯೋಜನಾಧಿಕಾರಿ ಡಾ. ಎಂ ಬಿ ದಳಪತಿ, ಕೆಸಿಡಿ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಡಾ. ಎಚ್ ಕೆ ಕೋಳೂರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X