ಧಾರವಾಡ | ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ಚಾಲನೆ

Date:

Advertisements

ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು.

ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಚಾಲನೆ ನೀಡಿದ ಬಳಿಕ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆದಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿ.ಮೀ ಮಾರ್ಗವನ್ನು ಗಂಟೆಗೆ 110 ಕಿಮೀ ವೇಗದಲ್ಲಿ ಕ್ರಮಿಸುತ್ತದೆ ಎಂದು ರೈಲ್ವೇ ಇಲಾಖೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಮದ್ಯ ಸಾಗಾಟಕ್ಕೆ ಬಸ್ಸಿನಲ್ಲಿ ಅನುಮತಿ ನೀಡುವಂತೆ ಆಗ್ರಹ

Advertisements

ಈ ರೈಲು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ ಆರು ದಿನ ಸಂಚರಿಸಲಿದೆ. ಜೂನ್‌ 27ರಂದು ಮಾತ್ರ ಹಲವು ಕಡೆ ನಿಲುಗಡೆ ನೀಡಲಿದೆ. ಜೂನ್‌ 28ರಿಂದ ಅಧಿಕೃತ ಸಂಚಾರ ಆರಂಭವಾಗಲಿದೆ. ಆಗ ನಿಗದಿತ ನಿಲ್ದಾಣಗಳಲ್ಲಿ ಮಾತ್ರ ನಿಲ್ಲುತ್ತದೆ.

ಧಾರವಾಡದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರದಲ್ಲಿ ಊಟ ಮತ್ತು ತಿಂಡಿಯೂ ಒಳಗೊಂಡಿರುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X