ಧಾರವಾಡ | ಪರೀಕ್ಷಾ ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆ ವಿರುದ್ಧ ದಲಿತ ಸಂಘಟನೆ ಆಕ್ರೋಶ

Date:

ಹುಬ್ಬಳ್ಳಿಯ ಅನುದಾನಿತ ಸೆಂಟ್ ಪೀಟರ್ಸ್ ಪ್ರೌಢಶಾಲೆಯ ಶಿಕ್ಷಕರ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆ ಬರೆದ ಶಾಲೆಯ ಒಟ್ಟು ನಾಲ್ಕು ವಿದ್ಯಾರ್ಥಿಗಳಲ್ಲಿ ಮೂವರು ಅನುತ್ತೀರ್ಣರಾಗಿರುವ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ದಲಿತ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

- Advertisement -

ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಭಾಷಾ ಅಲ್ಪಸಂಖ್ಯಾತರ ಕೋಟಾದ ಅನುದಾನಿತ ತೆಲುಗು ಮಾಧ್ಯಮದ ಸೆಂಟ್ ಪೀಟರ್ಸ್ ಪ್ರೌಢಶಾಲೆಯು 2022-23 ಸಾಲಿನ ಹತ್ತನೇ ತರಗತಿಯ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯಂತ ಕಳಪೆ ಮಟ್ಟದ ಸಾಧನೆಯನ್ನು ದಾಖಲಿಸಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯ ಹತ್ತನೇ ತರಗತಿಗೆ ಕೇವಲ ನಾಲ್ಕು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಅದರಲ್ಲಿ ಮೂರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ಇಲ್ಲಿನ ಶಿಕ್ಷಣದ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಒಬ್ಬ ಮುಖ್ಯಶಿಕ್ಷಕ ಸೇರಿದಂತೆ ಒಟ್ಟು ಮೂವರು ಶಿಕ್ಷಕರಿಗಾಗಿ ಸರ್ಕಾರ ತಿಂಗಳಿಗೆ ಸುಮಾರು ಮೂರು ಲಕ್ಷ ರೂಪಾಯಿಗಳನ್ನು ಸಂಬಳಕ್ಕಾಗಿ ವ್ಯಯಿಸುತ್ತಿದೆ. ಈ ಶಾಲೆಯು ಸತತವಾಗಿ ಕಳಪೆ ಸಾಧನೆ ಪ್ರದರ್ಶಿಸುತ್ತಿದ್ದರೂ ಸಂಬಂಧಪಟ್ಟ ಬಿಇಒ ಮತ್ತು ಡಿಡಿಪಿಐ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳದೇ ಇರುವುದು ಕರ್ತವ್ಯಲೋಪದ ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ.

ಪ್ರಸಕ್ತ ಸಾಲಿನ ಹತ್ತನೇ ತರಗತಿಗೆ ಕೇವಲ ಇಬ್ಬರು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯನ್ನು ಸೇರಿಸಿದರೂ ಕೇವಲ 8-10 ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಪ್ರವೇಶ ಪಡೆದಿರುವುದು ಕಳವಳಕಾರಿ ಸಂಗತಿ.

ಆಡಳಿತದ ಜವಾಬ್ದಾರಿ ಮರೆತು, ವಿದ್ಯಾರ್ಥಿಗಳ ಸಾಧನೆ ಮತ್ತು ಶಾಲೆಯ ನಿರ್ವಹಣೆಯ ಕುರಿತು ನಿರ್ಲಕ್ಷ್ಯ ಧೋರಣೆ ಹೊಂದಿರುವ ಧಾರವಾಡ ಬಾಸೆಲ್ ಮಿಷನ್ ಸಂಸ್ಥೆಯ ಬಿಷಪ್ ಮಾರ್ಟಿನ್ ಸಿ ಬುರ್ಗಾಯಿ, ಬಿಷಪ್ ನಿರಂಜನ, ಸೆಂಟ್ ಪೀಟರ್ಸ್ ಚರ್ಚಿನ ಫಾದರ್, ಕಾರ್ಯದರ್ಶಿ ಮತ್ತು 61 ವಾರ್ಡಿನ ಹಾಲಿ ಪಾಲಿಕೆ ಸದಸ್ಯ ಮತ್ತು ಪಾಲಿಕೆಯ ಹಾಲಿ ವಿರೋಧ ಪಕ್ಷದ ನಾಯಕರೂ ಆಗಿರುವ ದೊರೆರಾಜ ಮನ್ನೆಕುಂಟ್ಲ ಮುಂತಾದವರು ಇಲ್ಲಿನ ಅಸಮರ್ಥ ಶಿಕ್ಷಕರಿಗೆ ಒತ್ತಾಸೆಯಾಗಿ ನಿಂತು ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಹಣಕ್ಕಾಗಿ ಬ್ಲಾಕ್‌ಮೇಲ್‌; ಯುವತಿಯ ತಿರುಚಿದ ಅಶ್ಲೀಲ ಫೋಟೊ ತಂದೆಗೆ ಕಳುಹಿಸಿದ ಕಿರಾತಕ

ಸಮರ್ಪಕ ನಿರ್ವಹಣೆಯ ಕೊರತೆಯಿಂದ ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿರುವ ಬ್ರಿಟಿಷ್ ಕಾಲದ ಶಿಥಿಲಾವಸ್ಥೆಯ ಶಾಲಾ ಕಟ್ಟಡವು ಸಹ ಮುಂಬರುವ ದಿನಗಳಲ್ಲಿ ಅವಘಡಗಳಿಗೆ ಒಳಗಾಗುವ ಸಂಭವವಿರುವುದನ್ನು ಅಲ್ಲಗಳೆಯುವಂತಿಲ್ಲ.

ಪರಿಸ್ಥಿತಿ ಹೀಗೆಯೇ ಮುಂದುವರಿದಲ್ಲಿ ಶಾಲೆಯ ಆಡಳಿತ ಮಂಡಳಿಯಾದ ಬಾಸೆಲ್ ಮಿಷನ್ ಟ್ರಸ್ಟ್ ಧಾರವಾಡ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಅಖಿಲ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ರಾಜಾಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಂದ್ರಕಾಂತ ಯಾದವ, ಹಿರಿಯ ದಲಿತ ಹೋರಾಟಗಾರ ಲೋಕಮಾನ್ಯ ರಾಮದತ್ತ, ಆನಂದ ಮಾದರ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...