ಧಾರವಾಡ | ಇಪಿಎಸ್ ನಿವೃತ್ತರ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಇಪಿಎಸ್ ನಿವೃತ್ತರ ಪಿಂಚಣಿ ಮೊತ್ತವನ್ನು ಹೆಚ್ಚಿಗೆ ಮಾಡಲು ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಮಂಡಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು.

ಇಪಿಎಸ್ ನೌಕರ ಹೋರಾಟ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಎನ್ ಹಿರೇಮಠ ಮಾತನಾಡಿ, 2013 ರಿಂದ ಪಿಂಚಷಿ ಹೋರಾಟ ನಡೆಸಿದ ನಮಗೆ ಸದ್ಯ 1000 ರಿಂದ 3000 ಪಿಂಚಣಿ ಕೊಡುತ್ತಿದ್ದು, ಅದು ವಾರದ ಖರ್ಚಿಗೂ ಸಾಲುವುದಿಲ್ಲ. ಹೀಗಾಗಿ ಕೇಂದ್ರ ಡಿಎ, ನಮ್ಮ ಮಕ್ಕಳ ಮೆಡಿಕಲಗ ಮರುವೆಚ್ಚ ನೀಡಬೇಕು. ಕನಿಷ್ಠ 9000 ಕೊಟ್ಟರೆ ನಮಗೆ ಅನುಕೂಲವಾಗುತ್ತದೆ. ಈ ಕುರಿತು ಹಿಂದಿನ ಕಾಂಗ್ರೆಸ್ ಸರ್ಕಾರವೂ ಮತ್ತು ಇಂದಿನ ಬಿಜೆಪಿ ಸರ್ಕಾರವೂ ತಲೆಕೆಡಿದಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ವಿಭಾಗದ ಅಧ್ಯಕ್ಷ ಎ ಎಚ್ ಕುಲಕರ್ಣಿ ಮಾತನಾಡಿ, ನ್ಯಾಯಯುತವಾಗಿ ನಮಗೆ ದೊರೆಯಬೇಕಿದ್ದ, 1995 ಇಪಿಎಸ್ ಪಿಂಚಣಿ ಕೇಳುತ್ತಿದ್ದೇವೆ. ಕೂಡಲೆ ಪಿಂಚಣಿ ಜಾರಿಗೊಳಿಸಬೇಕು. ಇಪಿಎಸ್ ನಿವೃತ್ತರು ಹಾಗೂ ಅವಲಂಬಿತರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಮಾಡಿಕೊಂಡರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಆಟೋ-ಲಾರಿ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ರಾಜಶೇಖರ ಕೋಪರ್ಡೆ, ಕೆ.ಎಚ್.ಕುಲಕರ್ಣಿ, ಎಚ್.ಎ.ಜಾಗೀರದಾರ, ಸಿ.ಎನ್.ಹಿರೇಮಠ, ಬಿ.ಎನ್.ಘೋರ್ಪಡೆ ಇತರರು ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X