ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

Date:

Advertisements
  • ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ
  • ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ

ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ ಮತ್ತು ನ್ಯಾಯಾಂಗ ವಿರೋಧಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ” ಎಂದು ಆರೋಪಿಸಿದರು.

“ಧರ್ಮದ ಆಧಾರದ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಿದ್ದು, ಅಗತ್ಯವಿರುವ ಸಮುದಾಯಗಳಿಗೆ ಮರು ವಿತರಿಸಿದೆ” ಎಂದು ಸಮರ್ಥಿಸಿಕೊಂಡರು.

Advertisements

“ಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದ್ದು, ಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಸರಿಪಡಿಸಿದೆ. ಕೆಲವು ಮಠಾಧೀಶರು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ್ದಾರೆ. ಆದರೆ, ಇದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ಸಂಸ್ಕೃತಿಯಾಗಿರುವುದರಿಂದ ಈ ಶ್ರೀಗಳಿಗೆ ಇದು ಸೂಕ್ತವಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?  ತುಮಕೂರು | ಎಚ್‌ಡಿಕೆ ಮತ್ತೊಮ್ಮೆ ಸಿಎಂ ಆಗಬೇಕು; ಮಲೆಮಹದೇಶ್ವರಕ್ಕೆ ಜೆಡಿಎಸ್ ಕಾರ್ಯಕರ್ತರ ಪಾದಯಾತ್ರೆ

“ವಾಸ್ತವವಾಗಿ, ಲಿಂಗಾಯತ ಪಂಚಮಸಾಲಿಗಳು ಮತ್ತು ಒಕ್ಕಲಿಗರಿಗೆ ಮೀಸಲಾತಿ ನೀಡಲು ಕಾಂಗ್ರೆಸ್‌ಗೆ ಆಸಕ್ತಿ ಇರಲಿಲ್ಲ. ಕೆಲವು ಶಾಸಕರು ಬಿಜೆಪಿಗೆ ತೊಂದರೆ ಉಂಟುಮಾಡಲು ಮಾತ್ರ ಪಂಚಮಸಾಲಿ ಚಳವಳಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X