ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

Date:

Advertisements

ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ತಲ್ಲೂರ ಅವರು ತಮ್ಮ ಹುಟ್ಟ ಹಬ್ಬವನ್ನು ಕೇಕ್ ಕತ್ತರಿಸದೆ, ಪರಿಸರ ನಾಶಕ್ಕೆ ಎಡೆಮಾಡಿಕೊಡದೆ, ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ, ಪರಿಸರ ಖಾಳಜಿಯೊಂದಿಗೆ ವಿಭಿನ್ನವಾಗಿ ಆಚರಸಿಕೊಂಡಿದ್ದು, ಮಾದರಿ ಹುಟ್ಟುಹಬ್ಬವಾಗಿದೆ. ಆ ಹಿನ್ನೆಲೆಯಲ್ಲಿ ಅವರ ವಿದ್ಯಾರ್ಥಿಗಳು ನಗರವನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಗುರುಗಳಿಗೆ ಜನುಮದಿನದ ವಿಶಿಷ್ಠ ಉಡುಗೊರೆ ನೀಡಿದ್ದಾರೆ ಎಂದು ಡಾ. ವಿಲಾಸ ಕುಲಕರ್ಣಿ ಹೇಳಿದರು.

ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಶ್ರೀನಗರದ ಉದ್ಯಾನವನ ಹಾಗೂ ನಗರದ ಕೆಲ ರಸ್ತೆಗಳಲ್ಲಿ ಸ್ವಶ್ಚತೆ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಅಚರಿಸಿದ್ದು, ಈ ರೀತಿಯ ವಿಶಿಷ್ಟ ಆಚರಣೆಯು ಸತತ 5 ವರ್ಷಗಳಿ‌ಂದ ನಡೆದುಕೊಂಡು ಬಂದಿದ್ದು, ಈ ತರಹದ ಜನುಮದಿನದ ಆಚರಣೆ ನಮಗೂ ರೂಢಿಯಾಗಿದೆ ಅನ್ನುತ್ತಾರೆ ವಿದ್ಯಾರ್ಥಿಗಳು.

ಡಾ. ವಿಲಾದ ಕುಲಕರ್ಣಿ ಮುಂದುವರೆದು ಮಾತನಾಡಿ, ಹುಟ್ಟು ಹಬ್ಬ ಅಂದಾಕ್ಷಣ ಕೆಲವರು ಕೇಕ್ ಕತ್ತರಿಸಿ, ಮೊಟ್ಟೆ ಹೊಡೆದು ಪರಿಸರ ನಾಶ ಮಾಡುವ ರೀತಿಯಲ್ಲಿ ತಮ್ಮ ಜನುಮದಿನ ಆಚರಸಿಕೊಳ್ಳುತ್ತಾರೆ. ಆದರೆ ಬಸವರಾಜ ತಲ್ಲೂರ ಅವರು ಸ್ವಚ್ಛತಾ ಕಾರ್ಯದ ಮೂಲಕ, ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿರುವುದು ಬಹಳ ಖುಷಿತಂದಿದೆ. ಈ ರೀತಿಯ ಹುಟ್ಟು ಹಬ್ಬವು ಎಲ್ಲರಿಗೂ ಮಾದರಿ ಎಂದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

ಎಸ್ ಅರ್ ತಲ್ಲೂರ್ ಪೌಂಡೇಶನ್ ಕಾರ್ಯದರ್ಶಿ ಡಾ.‌ಸುಮಾ ತಲ್ಲೂರ, ಪರಿಸರ ಪ್ರೇಮಿ ಪ್ರಭು ಕೊಂಗಿ, ಸದಸ್ಯ ಮಹೇಶ ತಲ್ಲೂರ, ಶ್ರೀನಗರದ ನಿವಾಸಿಗಳು ಹಾಗೂ ವಿದ್ಯಾರ್ಥಿಬಳಗ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X