ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

Date:

ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ತಲ್ಲೂರ ಅವರು ತಮ್ಮ ಹುಟ್ಟ ಹಬ್ಬವನ್ನು ಕೇಕ್ ಕತ್ತರಿಸದೆ, ಪರಿಸರ ನಾಶಕ್ಕೆ ಎಡೆಮಾಡಿಕೊಡದೆ, ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ, ಪರಿಸರ ಖಾಳಜಿಯೊಂದಿಗೆ ವಿಭಿನ್ನವಾಗಿ ಆಚರಸಿಕೊಂಡಿದ್ದು, ಮಾದರಿ ಹುಟ್ಟುಹಬ್ಬವಾಗಿದೆ. ಆ ಹಿನ್ನೆಲೆಯಲ್ಲಿ ಅವರ ವಿದ್ಯಾರ್ಥಿಗಳು ನಗರವನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಗುರುಗಳಿಗೆ ಜನುಮದಿನದ ವಿಶಿಷ್ಠ ಉಡುಗೊರೆ ನೀಡಿದ್ದಾರೆ ಎಂದು ಡಾ. ವಿಲಾಸ ಕುಲಕರ್ಣಿ ಹೇಳಿದರು.

- Advertisement -

ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಶ್ರೀನಗರದ ಉದ್ಯಾನವನ ಹಾಗೂ ನಗರದ ಕೆಲ ರಸ್ತೆಗಳಲ್ಲಿ ಸ್ವಶ್ಚತೆ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಅಚರಿಸಿದ್ದು, ಈ ರೀತಿಯ ವಿಶಿಷ್ಟ ಆಚರಣೆಯು ಸತತ 5 ವರ್ಷಗಳಿ‌ಂದ ನಡೆದುಕೊಂಡು ಬಂದಿದ್ದು, ಈ ತರಹದ ಜನುಮದಿನದ ಆಚರಣೆ ನಮಗೂ ರೂಢಿಯಾಗಿದೆ ಅನ್ನುತ್ತಾರೆ ವಿದ್ಯಾರ್ಥಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಡಾ. ವಿಲಾದ ಕುಲಕರ್ಣಿ ಮುಂದುವರೆದು ಮಾತನಾಡಿ, ಹುಟ್ಟು ಹಬ್ಬ ಅಂದಾಕ್ಷಣ ಕೆಲವರು ಕೇಕ್ ಕತ್ತರಿಸಿ, ಮೊಟ್ಟೆ ಹೊಡೆದು ಪರಿಸರ ನಾಶ ಮಾಡುವ ರೀತಿಯಲ್ಲಿ ತಮ್ಮ ಜನುಮದಿನ ಆಚರಸಿಕೊಳ್ಳುತ್ತಾರೆ. ಆದರೆ ಬಸವರಾಜ ತಲ್ಲೂರ ಅವರು ಸ್ವಚ್ಛತಾ ಕಾರ್ಯದ ಮೂಲಕ, ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿರುವುದು ಬಹಳ ಖುಷಿತಂದಿದೆ. ಈ ರೀತಿಯ ಹುಟ್ಟು ಹಬ್ಬವು ಎಲ್ಲರಿಗೂ ಮಾದರಿ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

ಎಸ್ ಅರ್ ತಲ್ಲೂರ್ ಪೌಂಡೇಶನ್ ಕಾರ್ಯದರ್ಶಿ ಡಾ.‌ಸುಮಾ ತಲ್ಲೂರ, ಪರಿಸರ ಪ್ರೇಮಿ ಪ್ರಭು ಕೊಂಗಿ, ಸದಸ್ಯ ಮಹೇಶ ತಲ್ಲೂರ, ಶ್ರೀನಗರದ ನಿವಾಸಿಗಳು ಹಾಗೂ ವಿದ್ಯಾರ್ಥಿಬಳಗ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...