ಧಾರವಾಡ | ವಿದ್ಯಾರ್ಥಿಗಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡಿ: ಕುಲಸಚಿವ ಡಾ. ಎ.ಚನ್ನಪ್ಪ

Date:

Advertisements

ವಿದ್ಯಾರ್ಥಿಗಳು ತಂದೆ ತಾಯಿಯ ಕನಸು ನನಸಾಗಿಸಲು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಮೊಬೈಲ್ ದುರ್ಬಳಿಕೆ ಮಾಡಿಕೊಳ್ಳದೆ ಅವಶ್ಯಕತೆಗೆ ತಕ್ಕಂತೆ ಬಳಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ.ಚನ್ನಪ್ಪ ಹೇಳಿದರು.

ನಗರದ ಜ್ಞಾನಧಾರ ಸಭಾಭವನದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ 2024-25 ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಎನ್.ಸಿ.ಸಿ, ಯುವ ರೆಡ್ ಕ್ರಾಸ್, ರೋವರ್ಸ್ ಹಾಗೂ ರೇಂಜರ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅನವಶ್ಯಕವಾಗಿ ಸಮಯ ವ್ಯರ್ಥ ಮಾಡದೇ ಮೊಬೈಲ್ ದುರ್ಬಳಕೆ ಆಗದಂತೆ ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡಬೇಕು. ಮತ್ತು ತಮ್ಮಲ್ಲಿ ಅಡಗಿರುವ ಅಗಾಧ ಶಕ್ತಿಯನ್ನು ವಿವೇಕದಿಂದ ಬಳಸಿಕೊಂಡು ನಿತ್ಯ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ವಿದ್ಯಾರ್ಥಿಗಳು ಯಾವಾಗಲೂ ದೊಡ್ಡ ಕನಸುಗಳನ್ನೇ ಕಾಣುತ್ತ ಅವುಗಳ ಸಾಧನೆಗೆ ಸತತ ಪ್ರಯತ್ನ ಮಾಡಬೇಕು ಎಂದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ಸಂವಿಧಾನವು ನಮ್ಮ ರಕ್ಷಾ ಕವಚವಾಗಿದೆ: ನ್ಯಾ.‌ ಪರಶುರಾಮ‌ ದೊಡಮನಿ

ಕಾಲೇಜಿನ ಪ್ರಾಂಶುಪಾಲರಾದ ಡಾ. ನಳಿನಿ ಬೆಂಗೇರಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಬಳಸಿಕೊಂಡು ನಿಮ್ಮ ತಂದೆ -ತಾಯಿ ಮತ್ತು ಕಾಲೇಜಿಗೆ ಉತ್ತಮ ಹೆಸರು ಬರುವಂತೆ ಬೆಳೆಯಬೇಕು ಎಂದರು.

ಸುಮಿತ್ರಾ ಅಣ್ಣಿಗೇರಿ, ವಿದ್ಯಾ ರಾಯ್ಕರ್, ಸಂಜೋತಾ ಶಿರಸಂಗಿ, ಪರಮೇಶ್ವರಪ್ಪ ಗೆಜ್ಜಿ, ಲತಾ ಕಿಲ್ಲೆದಾರ ವೇದಿಕೆ ಮೇಲಿದ್ದರು. ಇಬ್ರಾಹಿಂ ಸೌದಾಗರ ನಿರೂಪಿಸಿದರು, ಡಾ.ಜಯಾನಂದ ಹಟ್ಟಿ ಸ್ವಾಗತಿಸಿದರು, ಡಾ.ಜಿ.ಕೆ.ಬಡಿಗೇರ ಪ್ರಸ್ತವಿಕವಾಗಿ ಮಾತನಾಡಿದರು ಹಾಗೂ ಶಿವಾನಂದ ನರಹಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X