ಧಾರವಾಡ | ಸಾಧನೆಯ ಹಾದಿಯಲ್ಲಿ ಕಲ್ಲು ಮುಳ್ಳು ಸಹಜ: ಪ್ರಯತ್ನ ನಿಲ್ಲದಿರಲಿ: ಡಾ. ಗುರುನಾಥ್ ಬುಲ್ ಬುಲೆ

Date:

Advertisements

ಯಶಸ್ಸು ಒಂದೇ ದಿನದಲ್ಲಿ ಆಗುವುದಿಲ್ಲ ನಡೆಯುವ ಹಾದಿಯಲ್ಲಿ ಕಲ್ಲು ಮುಳ್ಳುಗಳು ಸಹಜ. ಹಾಗೆಂದ ಮಾತ್ರಕ್ಕೆ ಪ್ರಯತ್ನ ನಿಲ್ಲಿಸುವುದು ಬೇಡ. ಸೋಲೇ ಗೆಲುವಿನ ಸೋಪಾನವಾಗಿದ್ದು, ಪ್ರಯತ್ನ ಮುಂದುವರೆದಾಗ ಖಂಡಿತ ಯಶಸ್ಸು ನಮ್ಮದಾಗುತ್ತದೆ ಎಂದು ಧಾರವಾಡ ಅಂಜುಮನ್ ವಿದ್ಯಾಲಯದಲ್ಲಿ ಡಾ. ಗುರುನಾಥ್ ಬುಲ್ ಬುಲೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.

ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಪಿಜಿ ಅಧ್ಯಯನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಬಿಎ, ಬಿಎಸ್ಸಿ, ಬಿಕಾಂ, ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕುಮಾರ್ ಅಹಮದ್ ರಜಾ ಪಠಾನ್ ಕುರಾನ್, ಕುಮಾರಿ ಆಕಾಂಕ್ಷ ಶ್ಲೋಕ ಪಠಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ಎಂ.ಎನ್.ಮಕಾಂದರ್, ಬಿ.ಎ, ಬಿ. ಎಸ್ ಸಿ ಮತ್ತು ಬಿಕಾಂ 18 ವಿಭಾಗಗಳ ಸಿಬ್ಬಂದಿ ವರ್ಗದವರನ್ನು ಪರಿಚಯಿಸಿದರು. ಡಾ. ಏನ್. ವಿ. ಗುದಗನವರ್ ಕಾಲೇಜಿನ ಕುರಿತು ಮಾಹಿತಿಯನ್ನು ತಿಳಿಸಿದರು.

Advertisements

ಐ.ಕ್ಯೂ ಏ ಸಿ ಎಸ್ ಸಂಯೋಜಕ ಡಾ. ಎನ್. ಬಿ ನಾಲತವಾಡ ವೇದಿಕೆ ಮೇಲಿದ್ದರು. ಗ್ರಂಥ ಪಾಲಕ ಡಾ.ಗೌರಿ ಕೆರಿಮಠ ಗ್ರಂಥಾಲಯ ಕುರಿತು ಪಿಪಿಟಿ ಮೂಲಕ ಮಾಹಿತಿ ಒದಗಿಸಿದರು. ಡಾ. ಬಿಬಿ ಆಯೇಶಾ ಚಕೋಲಿ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಡಾ. ಸೈಯದ್ ತಾಜುನ್ನೆಸಾ ವಂದನಾರ್ಪಣೆ, ದಿನಾಚರಣೆ ಸಮಿತಿ ಅಧ್ಯಕ್ಷೆ ಡಾ. ಸೌಭಾಗ್ಯ ಜಾದವ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X