ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

Date:

Advertisements

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವ ವಾಹನಗಳು, ಜುಬ್ಲಿ ಸರ್ಕಲ್, ಸಿಎಸ್‍ಐ ಕಾಲೇಜ್ ರೋಡ್, ಲೈನ್ ಬಜಾರ್ ಮುಖಾಂತರ ಎನ್.ಟಿ.ಟಿ.ಎಫ್ ಕ್ರಾಸ್ ಮುಖಾಂತರ ಹುಬ್ಬಳ್ಳಿ ಕಡೆಗೆ ಹೋಗಬೇಕು.

ಸವದತ್ತಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಡಿಪೋ ಸರ್ಕಲ್, ಗೊಲ್ಲರ ಓಣಿ ಕ್ರಾಸ್, ಕಮಲಾಪೂರ ಉಸುಕಿನ ಅಡ್ಡಾ, ಮರಾಠಾ ಕಾಲನಿ ರೋಡ ಮುಖಾಂತರ ಹೋಗಬೇಕು.

Advertisements

ನವಲಗುಂದ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಚರಂತಿಮಠ ಗಾರ್ಡನ್ ಕ್ರಾಸ್, ಕಾಮನಕಟ್ಟಿ ಕೂಟ, ಹೊಸ ಯಲ್ಲಾಪೂರ ಸರ್ಕಲ್, ಸುಣ್ಣದ ಬಟ್ಟಿ ರೋಡ ಮೂಲಕ ಎಲ್.ಎಮ್.ವಿ ವಾಹನಗಳು ಮತ್ತು ಹೆಬ್ಬಳ್ಳಿ ಅಗಸಿ, ಡಿಪೋ ಸರ್ಕಲ್, ಗೊಲ್ಲರ ಓಣಿ, ಮರಾಠಾ ಕಾಲನಿ ರೋಡ ಮೂಲಕ ಬಸ್ಸುಗಳು ಹೋಗಬೇಕು.

ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ದಾಸನಕೊಪ್ಪ ಸರ್ಕಲ್, ಜರ್ಮನ್ ಸರ್ಕಲ್, ಉಪನಗರ ಪಿ.ಎಸ್ ಮೂಲಕ ಹೋಗಬೇಕು.

ಗೋವಾ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಜರ್ಮನ್ ಸರ್ಕಲ್, ಹಳೇ ಎಸ್.ಪಿ.ಆಪೀಸ್ ಕ್ರಾಸ್, ನಾಯಕ ಅಡ್ಡಾ ಕ್ರಾಸ್, ಹಳೇ ಬಸ್ ನಿಲ್ದಾಣ ಮೂಲಕ ಹೋಗಬೇಕು.

ಹುಬ್ಬಳ್ಳಿ ಮತ್ತು ಕಲಘಟಗಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಕೋರ್ಟ್‌ ಸರ್ಕಲ್, ಕಾಸ್ಮಸ್ ಕ್ಲಬ್ ರೋಡ, ಲೈನ್ ಬಜಾರ, ಸಿಎಸ್‍ಐ ಕಾಲೇಜ್ ರೋಡ ಮತ್ತು ಬಾಗಲಕೋಟ್ ಪೆಟ್ರೋಲ್ ಪಂಪ, ಮಹಿಷಿ ರೋಡ, ಎಮ್ಮಿಕೇರಿ ಕ್ರಾಸ್, ಹೆಡ್ ಪೋಸ್ಟ್ ಆಫೀಸ್, ಕೋರ್ಟ್ ಸರ್ಕಲ್ ಮೂಲಕ ಸಂಚರಿಸಬೇಕೆಂದು ಮಹಾನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X