ಧಾರವಾಡ | ಪತ್ನಿಗೆ ಮಾತ್ರವಲ್ಲ, ತಂದೆಗೂ ವಿಮೆ ಹಣ ನೀಡುವಂತೆ ಗ್ರಾಹಕ ಆಯೋಗ ತೀರ್ಪು

Date:

ವಿಮಾ ಹಣವನ್ನು ಮೃತ ವ್ಯಕ್ತಿಯ ಪತ್ನಿಗೆ ನೀಡಿರುವ ವಿಮಾ ಕಂಪನಿಯ ಕ್ರಮಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಆಕ್ಷೇಪಿಸಿದ್ದು, ವಿಮಾ ಪಾಲಿಸಿಯ ನಾಮಿನಿದಾರ ಆಗಿರುವ ಮೃತ ವ್ಯಕ್ತಿಯ ತಂದೆಗೂ ವಿಮಾ ಹಣ ಪಾವತಿಸುವಂತೆ ಸೂಚಿಸಿದೆ.

- Advertisement -

2017ರಲ್ಲಿ ಸರ್ವ ಸುರಕ್ಷಾ ಲಾಭದ ವಿಮಾ ಪಾಲಿಸಿಯನ್ನು ಎಚ್‌ಡಿಎಫ್‌ಸಿ ಎರಗೋ ವಿಮಾ ಕಂಪನಿಯಿಂದ ಹುಬ್ಬಳ್ಳಿಯ ಆನಂದ ನಗರ ನಿವಾಸಿಯಾಗಿದ್ದ ಆಶೀಫ್ ಮುಲ್ಲಾ ಪಡೆದಿದ್ದರು. ಅದು 10 ಲಕ್ಷ ರೂ. ಮೌಲ್ಯದ ಪಾಲಿಸಿಯಾಗಿತ್ತು. ವಿಮಾದಾರ 7,646 ರೂ. ಹಣ ಪ್ರೀಮಿಯಂ ಕಟ್ಟಿದ್ದು, ಈ ಪಾಲಿಸಿಗೆ ವಿಮಾದಾರರಾಗಿದ್ದ ಆಸೀಫ್ ತಮ್ಮ ತಂದೆ ಅಲ್ಲಾಭಕ್ಷ ಮುಲ್ಲಾ ಅವರನ್ನು ನಾಮಿನಿಯನ್ನಾಗಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2019ರ ಡಿಸೆಂಬರ್‌ 19ರಂದು ಗದಗ ಹುಲಕೋಟಿ ಹತ್ತಿರ ಹೋಗುವಾಗ ಲಾರಿ ಮತ್ತು ಬೈಕಿಗೆ ಢಿಕ್ಕಿಯಾಗಿ ವಿಮಾದಾರ ಆಸೀಫ್ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಗದಗ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಎಲ್ಲ ದಾಖಲೆಗಳನ್ನು ಪಡೆದು ನಾಮಿನಿಯಾಗಿದ್ದ ತಂದೆ ಅಲ್ಲಾಭಕ್ಷ ಮುಲ್ಲಾ ಅವರು, ಮೃತನ ವಿಮೆ ಕ್ಲೈಮ್‌ ಮಾಡಿಕೊಡುವಂತೆ  ಅರ್ಜಿ ಸಲ್ಲಿಸಿದ್ದರು. ಆದರೆ ವಿಮಾ ಕಂಪನಿಯು ಈ ಕ್ಲೈಮ್‌ ಅರ್ಜಿಯನ್ನು ಪರಿಗಣಿಸದೆ ಮೃತನ ಹೆಂಡತಿ ನೂರ್ ಜಹಾನಬಿ ಅವರಿಗೆ 10 ಲಕ್ಷ ರೂ. ವಿಮಾ ಹಣ ಸಂದಾಯ ಮಾಡಿತ್ತು.

ಈ ಹಿನ್ನೆಲೆಯಲ್ಲಿ ತಂದೆ ಅಲ್ಲಾಭಕ್ಷ ಮುಲ್ಲಾ ಅವರು, “ಮೃತನ ವಿಮಾ ಪಾಲಿಸಿಗೆ ನಾಮಿನಿ ಆಗಿರುವುದರಿಂದ ವಿಮಾ ಹಣವನ್ನು ತನಗೆ ಕೊಡಬೇಕಾಗಿತ್ತು. ಆದರೆ ವಿಮಾ ಕಂಪನಿ ಅವರು ತನ್ನ ಕ್ಲೈಮನ್ನು ಧಿಕ್ಕರಿಸಿ ಮೃತನ ಹೆಂಡತಿಗೆ ವಿಮಾ ಹಣ 10 ಲಕ್ಷ ರೂ. ಕೊಟ್ಟಿರುವುದು ತಪ್ಪು. ಅಂತಹ ವಿಮಾ ಕಂಪನಿಯವರ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆಯಾಗುತ್ತದೆ. ಹೀಗಾಗಿ ವಿಮಾ ಕಂಪನಿಯವರ ಮೇಲೆ ಸೂಕ್ತ ಕ್ರಮ ಕೈಗೊಂಡು ತನಗೆ ಪರಿಹಾರ ಕೊಡಿಸಬೇಕು” ಎಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ದೂರಿನನ್ವಯ ಅಧ್ಯಕ್ಷ ಈಶಪ್ಪ ಭೂತೆ ಮತ್ತು ಸದಸ್ಯರುಗಳಾದ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಒಳಗೊಂಡ ಆಯೋಗವು ವಿಚಾರಣೆ ಕೈಗೊಂಡಿದ್ದು, “ದೂರುದಾರ ಅಲ್ಲಾಭಕ್ಷ ಮೃತ ಆಸೀಫ್ ಮುಲ್ಲಾರವರ ತಂದೆಯಾಗಿದ್ದು, ವಿಮಾ ಪಾಲಿಸಿಗೆ ನಾಮಿನಿಯೂ ಆಗಿದ್ದಾರೆ. 2015ರಲ್ಲಿ ಆಗಿರುವ ವಿಮಾ ಕಾಯ್ದೆಯ ತಿದ್ದುಪಡಿಯಂತೆ ವಿಮಾದಾರ ಮೃತನಾದಲ್ಲಿ ವಿಮಾ ಪಾಲಸಿಯ ಹಣ ಪಡೆಯಲು ನಾಮಿನಿ ಮಾತ್ರ ಅರ್ಹರಿದ್ದಾರೆ. ಆದರೆ ಈ ಪ್ರಕರಣದಲ್ಲಿ ನಾಮಿನಿಯನ್ನು ಬಿಟ್ಟು, ಮೃತನ ಹೆಂಡತಿ ನೂರಜಹಾನಬಿಗೆ ವಿಮಾ ಕಂಪನಿಯವರು ಹಣ ಸಂದಾಯ ಮಾಡಿರುವುದು ವಿಮಾ ನಿಯಮಕ್ಕೆ ವಿರುದ್ಧವಾಗಿದೆ” ಎಂದು ತಿಳಿಸಿದರು.

“ವಿಮಾ ಕಂಪನಿಯವರ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ. ತಮ್ಮದೇ ವಿಮಾ ನಿಯಮಕ್ಕೆ ವ್ಯತಿರಿಕ್ತವಾಗಿ ಮೃತನ ಹೆಂಡತಿಗೆ ವಿಮಾ ಹಣ ನೀಡಿರುವುದನ್ನು ಆಯೋಗ ಒಪ್ಪಿಕೊಂಡಿಲ್ಲ. ವಿಮಾ ನಿಯಮದಂತೆ ನಾಮಿನಿಯಾದ ದೂರುದಾರ ವಿಮಾ ಪಾಲಿಸಿ ಮೊತ್ತ ₹10 ಲಕ್ಷ ಪಡೆಯಲು ಅರ್ಹರಿದ್ದಾರೆ” ಎಂದು ಆಯೋಗ ತೀರ್ಪು ನೀಡಿದೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಒಯು ಹಗರಣ | ಎಫ್‌ಐಆರ್ ದಾಖಲು; ಸಿಬಿಐ ತನಿಖೆ ಆರಂಭ

“ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನಾಮಿನಿಯಾದ ದೂರುದಾರನಿಗೆ ವಿಮಾ ಕಂಪನಿ ವಿಮಾ ಮೊತ್ತ ₹10 ಲಕ್ಷ ಕೊಡುಬೇಕು. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ ₹50,000 ಪರಿಹಾರ ಮತ್ತು ₹5,000 ಪ್ರಕರಣದ ಖರ್ಚು ವೆಚ್ಚ ನೀಡಬೇಕು” ಎಂದು  ಆಯೋಗ ತಿಳಿಸಿದೆ.

“ಒಂದು ತಿಂಗಳ ಒಳಗಾಗಿ ₹10ಲಕ್ಷ ವಿಮಾ ಮೊತ್ತ ಕೊಡಲು ವಿಫಲರಾದಲ್ಲಿ ತೀರ್ಪು ನೀಡಿದ ದಿನಾಂಕದಿಂದ ವಿಮಾ ಮೊತ್ತದ ಮೇಲೆ ಶೇ.8ರಂತೆ ಬಡ್ಡಿ ಲೆಕ್ಕ ಹಾಕಿ ಕೊಡಬೇಕು” ಎಂದು  ಆಯೋಗ ಎದುರುದಾರರಿಗೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...